ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 3 FEBRUARY 2024
SHIKARIPURA : ದೂರು ನೀಡಿದ ನಾಲ್ಕೇ ಗಂಟೆಯಲ್ಲಿ ಪೊಲೀಸರು ಆರೋಪಿಯನ್ನು ಬಂಧಿಸಿ ಆತನಿಂದ ಎರಡು ಲಕ್ಷ ರೂ. ನಗದು ವಶಪಡಿಸಿಕೊಂಡಿದ್ದಾರೆ. ಬಾಳೆಕೊಪ್ಪ ಗ್ರಾಮದ ಹನುಮಂತ ನಾಯ್ಕ ಎಂಬುವವರ ಮನೆಯಲ್ಲಿ ಕಳ್ಳತನವಾಗಿತ್ತು.
ಹನುಮಂತ ನಾಯ್ಕ ಅವರ ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಘಟನೆ ಸಂಭವಿಸಿತ್ತು. ಮನೆ ಬಾಗಿಲಿನ ಬೀಗ ಹಾಕಿ ಅದನ್ನು ಬಾಗಿಲಿನ ಬಳಿ ಇರಿಸಿದ್ದರು. ಅದೇ ಬೀಗ ಬಳಸಿ ಮನೆಯೊಳಗೆ ಹೋಗಿದ್ದ ಯುವಕ 2,05,000 ರೂ. ನಗದು ಕಳವು ಮಾಡಿ ಯುವಕ ತಲೆಮರೆಸಿಕೊಂಡಿದ್ದ. ಸಿಸಿಟಿವಿ ಪರಿಶೀಲಿಸಿದಾಗ ತಮ್ಮೂರಿಗೆ ಆಗಾಗ ಬರುತ್ತಿದ್ದ ಚನ್ನಗಿರಿ ಮೂಲದ ಕಾಲೇಜು ವಿದ್ಯಾರ್ಥಿ ಎಂದು ಗೊತ್ತಾಗಿದೆ.
ಈ ಬಗ್ಗೆ ದೂರು ಬಂದ ಹಿನ್ನೆಲೆ ಶಿಕಾರಿಪುರ ಗ್ರಾಮಾಂತರ ಠಾಣೆ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ದೂರು ದಾಖಲಾದ ಕೇವಲ 4 ಗಂಟೆಯ ಒಳಗಾಗಿ ಆರೋಪಿಯ ಬಂಧನವಾಗಿದೆ. ಐಫೋನ್ ಖರೀದಿಗಾಗಿ ಕಳ್ಳತನ ಮಾಡಿದ್ದಾಗಿ ವಿಚಾರಣೆ ವೇಳೆ ಹೇಳಿದ್ದಾನೆ ಎಂದು ತಿಳಿದು ಬಂದಿದೆ. ಇನ್ಸ್ಪೆಕ್ಟರ್ ಆರ್.ಆರ್ ಪಾಟೀಲ್ ನೇತೃತ್ವದಲ್ಲಿ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಇದನ್ನೂ ಓದಿ – 25 ವರ್ಷದ ಯುವಕನಿಗೆ 20 ವರ್ಷ ಜೈಲು ಶಿಕ್ಷೆ, 50 ಸಾವಿರ ರೂ. ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್
LATEST NEWS
- ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆ, ಸ್ಥಳಕ್ಕೆ ತುಂಗಾ ನಗರ ಪೊಲೀಸರು ದೌಡು

- ಭದ್ರಾವತಿ ವ್ಯಕ್ತಿಗೆ 2 ವರ್ಷ ಜೈಲು, ₹10,000 ದಂಡ, ಕಾರಣ ಹೂವಿನ ಗಿಡ

- ಶಿವಮೊಗ್ಗದ ಸವಾರರೆ ಹುಷಾರ್, ಬೈಕ್ನಿಂದ ಬಿದ್ದರು, ಆಟೋ ಜಖಂ, ಕಾರ್ ಕೆಳಗೆ ಡ್ಯಾಮೇಜ್, ಏನಿದು?

- ಭದ್ರಾವತಿ ಹೊಸ ಸಿದ್ಧಾಪುರದಲ್ಲಿ ಮನೆಗೆ ನುಗ್ಗಿದ ಕಳ್ಳರು, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಕಳವು

- ಇವತ್ತಿನ ₹98,140ಕ್ಕೆ ತಲುಪಿದೆ ಅಡಿಕೆ | 12 ಫೆಬ್ರವರಿ 2026 | ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು






