SHIVAMOGGA LIVE NEWS | 14 MARCH 2024
SORABA : ಬ್ಯಾಂಕಿನಿಂದ ಬಿಡಿಸಿಕೊಂಡು ಬಂದಿದ್ದ 1.30 ಲಕ್ಷ ರೂ. ಹಣ ಕಳ್ಳತನವಾಗಿದೆ. ಸೊರಬ ತಾಲೂಕು ಆನವಟ್ಟಿಯಲ್ಲಿ ಗ್ಯಾರೇಜ್ ಒಂದರ ಮುಂದೆ ಘಟನೆ ಸಂಭವಿಸಿದೆ.
ಸಮನವಳ್ಳಿಯ ನಾಗರಾಜ್ ಎಂಬುವವರು ಕೆನರಾ ಬ್ಯಾಂಕ್ನಿಂದ 1.30 ಲಕ್ಷ ರೂ. ಹಣ ಬಿಡಿಸಿಕೊಂಡಿದ್ದರು. ಅದನ್ನು ಕವರ್ ಒಂದರಲ್ಲಿ ಹಾಕಿ ಬೈಕ್ನ ಹ್ಯಾಂಡಲ್ಗೆ ಸಿಕ್ಕಿಸಿದ್ದರು. ಬ್ಯಾಂಕ್ ಪಕ್ಕದ ಗ್ಯಾರೇಜ್ ಮುಂದೆ ಬೈಕ್ ನಿಲ್ಲಿಸಿ ಗ್ಯಾರೇಜಿನವರ ಜೊತೆಗೆ ಮಾತನಾಡುತ್ತಿದ್ದರು. ಬೈಕ್ ಕಡೆಗೆ ತಿರುಗಿ ನೋಡಿದಾಗ ಹ್ಯಾಂಡಲ್ಗೆ ಸಿಕ್ಕಿಸಿದ್ದ ಕವರ್ ನಾಪತ್ತೆಯಾಗಿತ್ತು. ಎಲ್ಲೆಡೆ ಹುಡುಕಿದ ನಾಗರಾಜ್, ಬಳಿಕ ದೂರು ನೀಡಿದ್ದಾರೆ. ಆನವಟ್ಟಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಹಣ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಅಗ್ನಿಶಾಮಕ ಅಧಿಕಾರಿ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200