ಶಿವಮೊಗ್ಗ LIVE
ಶಿವಮೊಗ್ಗ: ನೈಜೀರಿಯ ದೇಶದಿಂದ ಗಿಫ್ಟ್ ಬಂದಿದೆ. ಇದನ್ನು ಪಡೆಯಲು ಸರ್ವಿಸ್ ಟ್ಯಾಕ್ಸ್ ಕಟ್ಟಬೇಕು ಎಂದು ನಂಬಿಸಿ ತಾಯಿ ಮತ್ತು ಮಗಳಿಗೆ ಲಕ್ಷಾಂತರ ರುಪಾಯಿ ವಂಚಿಸಲಾಗಿದೆ (Cheated).
ಸೆಪ್ಟೆಂಬರ್ 26ರಂದು ಕರೆ ಮಾಡಿದ ವ್ಯಕ್ತಿಯೊಬ್ಬ, ತನ್ನನ್ನು ಮುಂಬೈ ಕಸ್ಟಮ್ಸ್ ಇಲಾಖೆ ಅಧಿಕಾರಿ ಎಂದು ಪರಿಚಯಿಸಿಕೊಂಡಿದ್ದ. ನೈಜೀರಿಯಾದಿಂದ ಗಿಫ್ಟ್ ಬಂದಿದೆ. ಅದನ್ನು ಪಡೆಯಲು ಸರ್ವಿಸ್ ಟ್ಯಾಕ್ಸ್ ಕಟ್ಟಬೇಕು ಎಂದು ನಂಬಿಸಿದ್ದ.

ವಂಚಕ ಸೂಚಿಸಿದ ವಿವಿಧ ಬ್ಯಾಂಕ್ ಖಾತೆಗಳಿಗೆ ತಾಯಿ ಮತ್ತು ಮಗಳು ಹಣ ವರ್ಗಾಯಿಸಿದ್ದಾರೆ. ಒಟ್ಟು ₹2,80,590 ಹಣ ವರ್ಗಾವಣೆ ಮಾಡಿದ್ದರು. ಆದರೆ ಇನ್ನೂ ₹2.95 ಲಕ್ಷ ವರ್ಗಾಯಿಸಬೇಕು ಎಂದು ಆತ ತಿಳಿಸಿದ್ದ. ಅನುಮಾನಗೊಂಡ ತಾಯಿ ಮತ್ತು ಮಗಳು ನೆರೆಹೊರೆಯಲ್ಲಿ ವಿಚಾರಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಮೋಸ ಹೋಗಿರುವುದು ಅರಿವಾದ ಹಿನ್ನೆಲೆ ದೂರು ನೀಡಿದ್ದಾರೆ. ಸಿ.ಇ.ಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಶಿವಮೊಗ್ಗದ ಕೇಕ್ ತಯಾರಿಕಾ ಘಟಕಗಳ ಮೇಲೆ ದಾಳಿ, ಏನೇನೆಲ್ಲ ಸಿಕ್ತು?
LATEST NEWS
- ಕುತ್ತಿಗೆ ಹಿಸುಕಿ ಹೆಂಡತಿಯನ್ನು ಕೊಂದ ಗಂಡ, ಎಲ್ಲಿ? ಕಾರಣವೇನು?

- ಮತ್ತೆ 91 ಸಾವಿರಕ್ಕೆ ತಲುಪಿದ ಅಡಿಕೆ ರೇಟ್ | 12 ಜನವರಿ 2026 | ಅಡಿಕೆ ಧಾರಣೆ

- ನಿಯಂತ್ರಣ ತಪ್ಪಿದ ರಾಯಲ್ ಎನ್ಫೀಲ್ಡ್ ಬೈಕ್, ಅಪಘಾತ, ಸವಾರ ಸ್ಥಳದಲ್ಲೇ ಸಾವು

- ವೈನ್ ಶಾಪ್ನಲ್ಲಿ ಬಿಯರ್ ಬಾಟಲಿಯಿಂದ ಯುವಕನ ತಲೆಗೆ ಹೊಡೆದ ವ್ಯಕ್ತಿ, ಕಾರಣವೇನು?

- ‘ಇಡೀ ದೇಶವೇ ಸ್ವಾಗತಿಸಿದೆ, ಕಾಂಗ್ರೆಸ್ ನಾಯಕರು ಮಾತ್ರ ಹಗುರ ಮಾತಾಡುತ್ತಿದ್ದಾರೆ’, ಏನಿದು?

About The Editor
ನಿತಿನ್ ಆರ್.ಕೈದೊಟ್ಲು






