ಶಿವಮೊಗ್ಗ ಲೈವ್.ಕಾಂ | SHIMOGA NEWS | 24 DECEMBER 2020
ಕಳೆದೊಂದು ವಾರದಿಂದ ನಾಪತ್ತೆ ಆಗಿದ್ದ ತಾಯಿ, ಇಬ್ಬರು ಮಕ್ಕಳು ಹೆಣವಾಗಿ ಪತ್ತೆಯಾಗಿದ್ದಾರೆ. ಕೆರೆಯಲ್ಲಿ ಮೂವರ ಶವ ಕೊಳೆತೆ ಸ್ಥಿತಿಯಲ್ಲಿ ಸಿಕ್ಕಿವೆ.
ಭದ್ರಾವತಿ ತಾಲೂಕು ಮಲ್ಲಾಪುರ ಗ್ರಾಮದ ಮಂಜಮ್ಮ (30), ಮಕ್ಕಳಾದ ರಚನಾ, ಯಮುನಾ ಅವರ ಮೃತದೇಹ ಕರೆಯಲ್ಲಿ ಪತ್ತೆಯಾಗಿದೆ. ಮೈದೊಳಲು ಮಲ್ಲಾಪುರ ಗ್ರಾಮದ ಕೆರೆಯಲ್ಲಿ ಮೃತದೇಹಗಳು ಪತ್ತೆಯಾಗಿವೆ.
ವಾರದ ಹಿಂದೆ ಕಾಣೆಯಾಗಿದ್ದರು
ಡಿಸೆಂಬರ್ 18ರಂದು ಮಂಜಮ್ಮ ಮತ್ತು ಇಬ್ಬರು ಮಕ್ಕಳು ನಾಪತ್ತೆಯಾಗಿದ್ದರು. ಕುಟುಂಬದವರು ಇವರಿಗಾಗಿ ಹುಡುಕಾಟ ನಡೆಸಿದ್ದರು. ಡಿಸೆಂಬರ್ 21ರಂದು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಮೂವರಿಗಾಗಿ ಶೋಧ ಕಾರ್ಯ ನಡೆಸಿದ್ದರು.
ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ
ಕರೆಯಲ್ಲಿ ದುರ್ವಾಸನೆ
ಮೈದೊಳಲು ಮಲ್ಲಾಪುರ ಕೆರೆಯಲ್ಲಿ ಇವತ್ತು ದುರ್ವಾಸನೆ ಬರಲು ಆರಂಭವಾಗಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದಾಗ ಮೂವರ ಮೃತದೇಹಗಳು ಕೊಳತೆ ಸ್ಥಿತಿಯಲ್ಲಿ ಪತ್ತೆಯಾಗಿವೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.
ಸಾವಿಗೆ ಕಾರಣವೇನು?
ಮಂಜಮ್ಮ, ಇಬ್ಬರು ಮಕ್ಕಳ ಜೊತೆಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಹೊಳೆಹೊನ್ನೂರು ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200