ಶಿವಮೊಗ್ಗದ ಬೊಮ್ಮನಕಟ್ಟೆ ಆಶ್ರಯ ಬಡಾವಣೆಯಲ್ಲಿ ಯುವಕನ ಮರ್ಡರ್

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗದ ಲೈವ್.ಕಾಂ | SHIMOGA NEWS |  30 ಡಿಸೆಂಬರ್ 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಕ್ಷುಲಕ ವಿಚಾರಕ್ಕೆ ಅಣ್ಣ, ತಮ್ಮನ ಮಧ್ಯೆ ಗಲಾಟೆಯಾಗಿದ್ದು, ಒಬ್ಬನ ಕೊಲೆಯಾಗಿದೆ. ಶಿವಮೊಗ್ಗದ ಬೊಮ್ಮನಕಟ್ಟೆಯಲ್ಲಿ ಕಳೆದ ರಾತ್ರಿ ಘಟನೆ ಸಂಭವಿಸಿದೆ.

AVvXsEichXaELYeDOhFU0n9XstiInpkhsI4y9y5uB VImqATyx1h3CLRA4zsRrFRxoiVo U462f0MYCBVD

ಗುರುಪ್ರಸಾದ್ (26) ಮೃತ ವ್ಯಕ್ತಿ. ಬುಧವಾರ ರಾತ್ರಿ ಗುರುಪ್ರಸಾದ್ ತನ್ನ ತಾಯಿಯೊಂದಿಗೆ ಜಗಳಕ್ಕೆ ಇಳಿದಿದ್ದ. ಈ ಸಂದರ್ಭ ಸಹೋದರ ವಿಶ್ವನಾಥ್ ಮಧ್ಯ ಪ್ರವೇಶಿಸಿದ್ದ. ಆಗ ಸಹೋದರರ ಮಧ್ಯೆ ಮಾತಿಗೆ ಮಾತು ಬೆಳೆದು ಗುರುಪ್ರಸಾದ್ ಕೊಲೆಯಾಗಿದೆ.

ಗಲಾಟೆಗೆ ಕಾರಣವೇನು?

ತನಗೆ ಆಟೋ ಒಂದನ್ನು ಕೊಡಿಸುವಂತೆ ಗುರುಪ್ರಸಾದ್ ತನ್ನ ತಾಯಿಯಲ್ಲಿ ಕೇಳಿದ್ದ. ಬುಧವಾರ ರಾತ್ರಿ ಇದೆ ವಿಚಾರಕ್ಕೆ ತಾಯಿಯೊಂದಿಗೆ ಜಗಳ ಆರಂಭಿಸಿದ್ದ. ಆಟೋ ಕೊಡಿಸಬೇಕು, ಇಲ್ಲವಾದಲ್ಲಿ ಆಸ್ತಿಯಲ್ಲಿ ಪಾಲು ನೀಡುವಂತೆ ಒತ್ತಾಯಿಸಿದ. ಈ ಸಂದರ್ಭ ಸಹೋದರ ವಿಶ್ವನಾಥ್ ಮಧ್ಯ ಪ್ರವೇಶಿಸಿದ್ದ.

ತಾನೇ ದುಡಿದು ಆಟೋ ಖರೀದಿಸುವಂತೆ ವಿಶ್ವನಾಥ್ ತನ್ನ ಸಹೋದರ ಗುರುಪ್ರಸಾದ್’ಗೆ ಸಲಹೆ ನೀಡಿದ. ಆಗ ಇಬ್ಬರ ಮಧ್ಯೆ ಮಾತಿಗೆ ಮಾತು ಬೆಳೆದಿದೆ. ಸಿಟ್ಟಿಗೆದ್ದ ವಿಶ್ವನಾಥ್, ಗಾರೆ ಕೆಲಸಕ್ಕೆ ಬಳಸುವ ಮಟ್ಟಗೋಲನ್ನು ತೆಗೆದುಕೊಂಡು ಗುರುಪ್ರಸಾದನ ತಲೆ ಮತ್ತು ಕಿವಿ ಭಾಗಕ್ಕೆ ಹಲ್ಲೆ ನಡೆಸಿದ್ದಾನೆ. ತೀವ್ರ ರಕ್ತಸ್ರಾವದಿಂದಾಗಿ ಗುರುಪ್ರಸಾದ್ ಮೃತಪಟ್ಟಿದ್ದಾನೆ.

ಘಟನೆ ಸಂಬಂಧ ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ABOUT ME NEW FINAL FINAL

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment