SHIVAMOGGA LIVE NEWS |18 DECEMBER 2022
ಸಾಗರ : ಕಾರು (innova car) ಮತ್ತು ಲಾರಿ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಕಾರು ಚಾಲಕನಿಗೆ ಗಂಭೀರ ಗಾಯವಾಗಿದೆ.
ಹೊಸನಗರ ತಾಲೂಕು ನಗರ ಹೋಬಳಿಯ ಮತ್ತಿಮನೆ ಗ್ರಾಮದ ಬಳಿ ಹೆದ್ದಾರಿಯಲ್ಲಿ ಘಟನೆ ಸಂಭವಿಸಿದೆ. ಇನ್ನೋವಾ (innova car) ಕಾರಿನ ಚಾಲಕ ಸಿದ್ದರಾಜು ಎಂಬುವವರ ಕಾಲು, ಹೊಟ್ಟೆ, ತಲೆ ಭಾಗಕ್ಕೆ ಗಂಭೀರ ಗಾಯವಾಗಿದೆ. ಕೂಡಲೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಕಾರಿನಲ್ಲಿ ನಾಲ್ವರು ಪ್ರಯಾಣಿಸುತ್ತಿದ್ದರು. ಮಹಿಳೆ ಮತ್ತು ಮಕ್ಕಳಿಗೆ ಸಣ್ಣಪುಟ್ಟ ಗಾಯವಾಗಿದೆ.
ಇದನ್ನೂ ಓದಿ – ಮೈಸೂರಿನಿಂದ ಐರಾವತ ಬಸ್ಸಲ್ಲಿ ಬಂದ ಇಂಜಿನಿಯರ್, ಶಿವಮೊಗ್ಗದಲ್ಲಿ ಇಳಿಯುವಾಗ ಕಾದಿತ್ತು ಶಾಕ್
ಕಾರಿನಲ್ಲಿದ್ದವರು ಮೈಸೂರಿನಿಂದ ಸಿಗಂದರು ದೇವಸ್ಥಾನಕ್ಕೆ ತೆರಳುತ್ತಿದ್ದರು. ಲಾರಿ ತಮಿಳುನಾಡಿಗೆ ಸೇರಿದ್ದು. ಘಟನೆಯಲ್ಲಿ ಇನ್ನೋವಾ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಲಾರಿ ಮುಂಭಾಗಕ್ಕೆ ಹಾನಿಯಾಗಿದೆ.
ಇದನ್ನೂ ಓದಿ – ಮೈಸೂರಿನ ಮಕ್ಕಳಿದ್ದ ಬಸ್ ಸಿಗಂದೂರು ಬಳಿ ಅಪಘಾತ, ಇಡೀ ದ್ವೀಪ ನೆರವಿಗೆ ನಿಂತಿದ್ದು ಹೇಗೆ ಗೊತ್ತಾ?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200