SHIMOGA NEWS, 24 NOVEMBER 2024 : ಕಳೆನಾಶಕ (Pesticide) ಸೇವಿಸಿದ್ದ ಶಿವಮೊಗ್ಗ ನಗರಸಭೆ ಮಾಜಿ ಸದಸ್ಯ ಆರ್.ಲಕ್ಷ್ಮಣ್ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಶುಕ್ರವಾರ ಆರ್.ಲಕ್ಷ್ಮಣ್, ಗೋಪಾಳದ ಪಾರ್ಕ್ ಒಂದರಲ್ಲಿ ಕಳೆನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಕೊನೆಗೆ ಲಕ್ಷ್ಮಣ್ ಅವರೆ ಆಂಬುಲೆನ್ಸ್ಗೆ ಕರೆ ಮಾಡಿ ಮಾಹಿತಿ ನೀಡಿದ್ದರು. ಕೂಡಲೆ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಶನಿವಾರ ಲಕ್ಷ್ಮಣ್ ಕೊನೆಯುಸಿರೆಳೆದಿದ್ದಾರೆ.

ಲಕ್ಷ್ಮಣ್ ಅವರು ಹೊಸಮನೆ ನಿವಾಸಿ. ಈ ಹಿಂದೆ ನಗರಸಭೆಗೆ ಬಿಜೆಪಿಯಿಂದ ಆಯ್ಕೆಯಾಗಿದ್ದರು. ಶಿವಮೊಗ್ಗ ನಗರಾಭಿವೃದ್ಧಿ ಪ್ರಾಧಿಕಾರದ ಸದ್ಯಸರಾಗಿದ್ದರು. ಇನ್ನು, ಘಟನೆ ಸಂಬಂಧ ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಮಾಟ, ಮಂತ್ರ, ಈ ಬಾಕ್ಸ್ ತೆಗೆದರೆ ಸತ್ತೇ ಹೋಗ್ತೀರ, ನಂಬಿದ ಕುಟುಂಬಕ್ಕೆ ಕಾದಿತ್ತು ಆಘಾತ
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು





