ಶಿವಮೊಗ್ಗ: ಬೆಳಗಿನ ಜಾವ ಬಸ್ ಹತ್ತುವಾಗ ಮಹಿಳೆಯ ವ್ಯಾನಿಟಿ ಬ್ಯಾಗ್ನಿಂದ ಬಂಗಾರದ ನೆಕ್ಲೇಸ್ (necklace) ಇದ್ದ ಬಾಕ್ಸ್ ಕಳ್ಳತನ ಮಾಡಲಾಗಿದೆ. ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಕೃತ್ಯ ನಡೆದಿದೆ.
ಭದ್ರಾವತಿಯ ಮುಕ್ತ ಎಂಬುವವರಿಗೆ ಸೇರಿದ ನೆಕ್ಲೇಸ್ ಕಳುವಾಗಿದೆ. ಕುಟುಂಬ ಸಹಿತ ಹುಬ್ಬಳ್ಳಿಗೆ ತೆರಳಲು ಬೆಳಗಿನ ಜಾವ 5 ಗಂಟೆಗೆ ಕೆಎಸ್ಆರ್ಟಿಸಿ ನಿಲ್ದಾಣದಲ್ಲಿ ಬಸ್ ಹತ್ತಿದ್ದರು. ಬಸ್ಸು ಶಿವಮೊಗ್ಗದ ಹೊನ್ನಾಳಿ ರಸ್ತೆಯ ಮೇಲ್ಸೇತುವೆ ಬಳಿ ತೆರಳುವಾಗ, ಮುಕ್ತ ಅವರು ಮಕ್ಕಳಿಗೆ ಕರೆ ಮಾಡಲು ವ್ಯಾನಿಟಿ ಬ್ಯಾಗ್ನಲ್ಲಿದ್ದ ಮೊಬೈಲ್ಗೆ ತೆಗೆಯಲು ಮುಂದಾದರು. ಆಗ ಜಿಪ್ ತೆರೆದಿರುವುದು ಗಮನಕ್ಕೆ ಬಂತು.
ಬ್ಯಾಗ್ನ ಒಳಗೆ ಇಟ್ಟಿದ್ದ ಬಂಗಾರದ ನೆಕ್ಲೇಸ್ ಇದ್ದ ಬಾಕ್ಸ್ ಕಳ್ಳತನವಾಗಿತ್ತು. ಮದುವೆ ಮುಗಿಸಿಕೊಂಡು ಶಿವಮೊಗ್ಗಕ್ಕೆ ಹಿಂತಿರುಗಿದಾಗ ದೂರು ನೀಡಿದ್ದಾರೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » UPSC 2024 ಫಲಿತಾಂಶ: 1000ಕ್ಕಿಂತ ಹೆಚ್ಚು ಅಭ್ಯರ್ಥಿಗಳು ಆಯ್ಕೆ, ಕರ್ನಾಟಕದ ವಿದ್ಯಾರ್ಥಿಗಳ ಭರ್ಜರಿ ಸಾಧನೆ

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200