| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()

ಶಿವಮೊಗ್ಗ ಲೈವ್.ಕಾಂ |SHIMOGA NEWS | 3 DECEMBER 2020
ಬಜರಂಗದಳ ಕಾರ್ಯಕರ್ತನ ಮೇಲಿನ ಹಲ್ಲೆ, ಬಳಿಕ ನಡೆದ ಗಲಭೆ ಹಿನ್ನೆಲೆಯಲ್ಲಿ ಹಳೆ ಶಿವಮೊಗ್ಗ ಭಾಗದಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ನೈಟ್ ಬೀಟ್ ವ್ಯವಸ್ಥೆಯನ್ನು ಚುರುಕುಗೊಳಿಸಲಾಗಿದೆ.
ಹಳೆ ಶಿವಮೊಗ್ಗದಲ್ಲಿ ಕರ್ಫ್ಯೂ
ಪರಿಸ್ಥಿತಿಯನ್ನು ತಿಳಿಗೊಳಿಸುವುದು ಮತ್ತು ರಾತ್ರಿ ವೇಳೆ ಅಹಿತಕರ ಘಟನೆ ತಪ್ಪಿಸುವ ಸಲುವಾಗಿ ಹಳೆ ಶಿವಮೊಗ್ಗ ಭಾಗದಲ್ಲಿ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ದೊಡ್ಡಪೇಟೆ, ಕೋಟೆ ಮತ್ತು ತುಂಗಾ ನಗರ ಠಾಣೆಗಳ ವ್ಯಾಪ್ತಿಯಲ್ಲಿ ಕರ್ಫ್ಯೂ ಜಾರಿಯಾಗಿದೆ.
ಎಲ್ಲೆಲ್ಲೂ ಬ್ಯಾರಿಕೇಡ್ಗಳಿಂದ ಬಂದ್
ಹಳೆ ಶಿವಮೊಗ್ಗ ಭಾಗ ಪ್ರವೇಶಿಸುವ ಎಲ್ಲಾ ಕಡೆಯಲ್ಲೂ ಬ್ಯಾರಿಕೇಡ್ ಹಾಕಿ ಬಂದ್ ಮಾಡಲಾಗಿದೆ. ಕರ್ಫ್ಯೂ ಜಾರಿಯಾಗಿರುವುದರಿಂದ ಈ ಭಾಗದಲ್ಲಿ ವಿನಾಕಾರಣ ಮನೆಯಿಂದ ಯಾರೂ ಹೊರ ಬರುವಂತಿಲ್ಲ. ಇನ್ನು, ಹಳೆ ಶಿವಮೊಗ್ಗ ಭಾಗಕ್ಕೆ ಯಾರಿಗೂ ಪ್ರವೇಶ ನೀಡುತ್ತಿಲ್ಲ. ನಗರದ ವಿವಿಧೆಡೆ ಪೊಲೀಸರು ಬಂದೋಬಸ್ತ್ ಕೈಗೊಂಡಿದ್ದು, ನಾಖಾಬಂಧಿ ಹಾಕಲಾಗಿದೆ.
ನೈಟ್ ಬೀಟ್ ಫುಲ್ ಬಿಗಿ
ಗಾಂಧಿ ಬಜಾರ್ ಸೇರಿದಂತೆ ಹಳೆ ಶಿವಮೊಗ್ಗ ಭಾಗದಲ್ಲಿ ನೈಟ್ ಬೀಟ್ ಬಿಗಿಗೊಳಿಸಲಾಗಿದೆ. ಗಣಪತಿ ಹಬ್ಬದ ಸಂದರ್ಭ ಕೈಗೊಳ್ಳಲಾಗುತ್ತಿದ್ದ ಮಾದರಿಯಲ್ಲೇ, ನೈಟ್ ಬೀಟ್ ಚೀತಾ ವ್ಯವಸ್ಥೆ ಮಾಡಲಾಗಿದೆ. ಯಾವುದೆ ಅಹಿತಕರ ಘಟನೆ ಸಂಭವಿಸಿದರೂ, ಪೊಲೀಸರು ತಕ್ಷಣಕ್ಕೆ ಸ್ಪಂದಿಸಿ, ಪರಿಸ್ಥಿತಿಯನ್ನು ಕಂಟ್ರೋಲ್ಗೆ ತೆಗೆದುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ.
VIDEO REPORT
ಇಬ್ಬರು ಎಸ್ಪಿಗಳ ಆಗಮನ
ಗಲಭೆ ನಿಯಂತ್ರಣ ಮತ್ತು ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಹೆಚ್ಚುವರಿಯಾಗಿ ಇಬ್ಬರು ಎಸ್ಪಿಗಳನ್ನು ನಿಯೋಜಿಸಾಗಿದೆ ಎಂದು ತಿಳಿದು ಬಂದಿದೆ. ಹೊರ ಜಿಲ್ಲೆಯಿಂದ ಬಂದಿರುವ ಇಬ್ಬರು ಎಸ್ಪಿಗಳು ಹಳೆ ಶಿವಮೊಗ್ಗದಲ್ಲಿ ರಾತ್ರಿ ಗಸ್ತು ತಿರುಗಿದರು.
ಹೊರ ಜಿಲ್ಲೆಯಿಂದ ಸಿಬ್ಬಂದಿಗಳು
ಹೆಚ್ಚುವರಿ ಪೊಲೀಸ್ ಸಿಬ್ಬಂದಿಗಳು ಶಿವಮೊಗ್ಗಕ್ಕೆ ಆಗಮಿಸಿದ್ದಾರೆ. ಹೆಚ್ಚುವರಿ ಸಿಬ್ಬಂದಿಗಳನ್ನು ಪ್ರಮುಖ ರಸ್ತೆಗಳು, ಸರ್ಕಲ್ಗಳು ಮತ್ತು ಸೂಕ್ಷ್ಮ ಸ್ಥಳಗಳಲ್ಲಿ ನಿಯೋಜಿಸಲಾಗಿದೆ.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಶಿವಮೊಗ್ಗದಲ್ಲಿ ಪೊಲೀಸರ ದಾಳಿ, ಸಾಗರದ ವ್ಯಕ್ತಿ ಅರೆಸ್ಟ್, ಕಾರಣವೇನು?
- ದಿನ ಪಂಚಾಂಗ, ಇಂದಿನ ರಾಶಿ ಭವಿಷ್ಯ – ಓದಲು ಇಲ್ಲಿ ಕ್ಲಿಕ್ ಮಾಡಿ
- ಭದ್ರಾವತಿಯಲ್ಲಿ ರೈಲಿನಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಶಿವಮೊಗ್ಗದಲ್ಲಿ ಸಾವು
- ಮಹಿಳೆಯರಿಗೆ ಗುಡ್ ನ್ಯೂಸ್, ಶಿವಮೊಗ್ಗದಲ್ಲಿ ನಾಳೆ ಉತ್ಸವ್ ಮೇಳ, ಏನೇನೆಲ್ಲ ಇರುತ್ತೆ?
- ಅಡಿಕೆ ಧಾರಣೆ | 11 ಡಿಸೆಂಬರ್ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?
- ಶಿವಮೊಗ್ಗದಲ್ಲಿ ನಾಳೆ ಕಂದಾಯೋತ್ಸವ, ಎರಡು ದಿನ ಏನೇನು ಕಾರ್ಯಕ್ರಮ ನಡೆಯಲಿದೆ?
- ಮರದಿಂದ ಬಿದ್ದು ಕಾಳಿಂಗ ಸರ್ಪ ಸಾವು, ಎಲ್ಲಿ? ಹೇಗಾಯ್ತು?
- ಭದ್ರಾವತಿ ಆಕಾಶವಾಣಿಯಲ್ಲಿ ಹೆಲ್ತ್ ಹಿಂಟ್ಸ್, ಬದುಕು ಜಟಕಾಬಂಡಿ ಕಾರ್ಯಕ್ರಮ, ಟೈಮಿಂಗ್ ಏನು?
![]()