ಶಿವಮೊಗ್ಗದ ಈ ರಸ್ತೆಯಲ್ಲಿ ಯಾರ ಜೀವಕ್ಕೂ ಗ್ಯಾರಂಟಿ ಇಲ್ಲ, CCTVಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE | 13 JUNE 2023

SHIMOGA : ರಾಷ್ಟ್ರೀಯ ಹೆದ್ದಾರಿ (Highway) ಪ್ರಾಧಿಕಾರದ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಮತ್ತೊಂದು ಅಪಘಾತ ಸಂಭವಿಸಿದೆ. ಎರಡು ಲಾರಿಗಳು ಮುಖಾಮುಖಿ ಡಿಕ್ಕಿಯಾಗಿವೆ. ಇದರ ಸಿಸಿಟಿವಿ ದೃಶ್ಯ ಶಿವಮೊಗ್ಗ ಲೈವ್.ಕಾಂಗೆ ಲಭ್ಯವಾಗಿದೆ.

Trucks-on-Sagara-Road-in-front-of-PES-College-Shimoga.

ಶಿವಮೊಗ್ಗ – ಸಾಗರ ಹೆದ್ದಾರಿಯಲ್ಲಿ (Highway) ಭಾನುವಾರ ಟಿಪ್ಪರ್‌ ಲಾರಿ ಮತ್ತು ಗೂಡ್ಸ್‌ ಲಾರಿ ಮುಖಾಮುಖಿ ಡಿಕ್ಕಿಯಾಗಿದ್ದವು. ಆಯನೂರು ಕಡೆ ತೆರಳುತ್ತಿದ್ದ ಟಿಪ್ಪರ್‌ ಲಾರಿ ಮತ್ತು ಶಿವಮೊಗ್ಗ ಕಡೆಗೆ ಸಾಗುತ್ತಿದ್ದ ಗೂಡ್ಸ್‌ ಲಾರಿ ಅಪಘಾತಕ್ಕೀಡಾಗಿದ್ದವು. ಲಾರಿ ಚಾಲಕರಿಗೆ ಗಾಯವಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಹೇಗಾಯ್ತು ಘಟನೆ?

ಪಿಇಎಸ್‌ ಕಾಲೇಜು ಮುಂಭಾಗ ಲಾರಿಗಳು ಮುಖಾಮುಖಿ ಡಿಕ್ಕಿಯಾಗಿದ್ದವು. ತುಮಕೂರು – ಶಿವಮೊಗ್ಗ ಚತುಷ್ಪಥ ರಸ್ತೆ ಕಾಮಗಾರಿಯ ಹಿನ್ನೆಲೆ ಶ್ರೀರಾಮ ಪುರ ಬಳಿ ರಸ್ತೆಯ ಒಂದೆ ಬದಿಯಲ್ಲಿ ದ್ವಿಮುಖ ಸಂಚಾರ ಮಾಡಬೇಕಿದೆ. ಶಿವಮೊಗ್ಗ ಕಡೆಗೆ ತೆರಳುತ್ತಿದ್ದ ಲಾರಿ ಚಾಲಕನಿಗೆ ಮುಂದೆ ರಸ್ತೆಯ ಒಂದೇ ಬದಿಯಲ್ಲಿ ದ್ವಿಮುಖ ಸಂಚಾರವಿದೆ ಎಂಬುದು ಅರಿವಾಗದೆ ಎದುರಿನಿಂದ ಬಂದ ಟಿಪ್ಪರ್‌ಗೆ ಡಿಕ್ಕಿ ಹೊಡೆದಿದ್ದಾನೆ. ಘಟನೆಯ ಸಿಸಿಟಿವಿ ವಿಡಿಯೋ ಶಿವಮೊಗ್ಗ ಲೈವ್.ಕಾಂಗೆ ಲಭ್ಯವಾಗಿದೆ.

ಇನ್ನೆಷ್ಟು ಅಪಘಾತ ಸಂಭವಿಸಬೇಕು?

ಆಯನೂರು ಕಡೆಯಿಂದ ಬರುವ ವಾಹನಗಳ ಚಾಲಕರಿಗೆ ಮುಂದೆ ರಸ್ತೆ ಕಾಮಗಾರಿ ನಡೆಯುತ್ತಿದೆ, ರಸ್ತೆಯ ಒಂದೇ ಬದಿಯಲ್ಲಿ ದ್ವಿಮುಖ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂಬ ಮಾಹಿತಿ ಇಲ್ಲದಿರುವುದೆ ಅಪಘಾತಕ್ಕೆ ಪ್ರಮುಖ ಕಾರಣ. ತಾತ್ಕಾಲಿಕ ಬ್ಯಾರಿಕೇಡ್‌, ಸೂಚನಾ ಫಲಕಗಳನ್ನು ಅಳವಡಿಸಿ ಚಾಲಕರಿಗೆ ಸೂಚನೆ ನೀಡಿದರೆ ವೇಗ ತಗ್ಗಿಸಿ ಅಪಘಾತ ತಪ್ಪಿಸಬಹುದಾಗಿದೆ. ಆದರೆ ಇಲ್ಲಿ ಸೂಚನಾ ಫಲಕಗಳೆ ಇಲ್ಲ.

ಶ್ರೀರಾಮಪುರದಿಂದ ಪಿಇಎಸ್‌ ಕಾಲೇಜಿನವರೆಗೆ ರಸ್ತೆಯಲ್ಲಿ ಪದೇ ಪದೆ ಅಪಘಾತ ಸಂಭವಿಸುತ್ತಿವೆ. ಶಾಲೆ, ಕಾಲೇಜು ವಿದ್ಯಾರ್ಥಿಗಳು ನಿತ್ಯ ಓಡಾಡುವ ರಸ್ತೆ. ಜಿಲ್ಲೆ, ಹೊರ ಜಿಲ್ಲೆಯ ಸಾವಿರಾರು ವಾಹನ ಸಂಚರಿಸುತ್ತವೆ. ಹಾಗಿದ್ದೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮುನ್ನೆಚ್ಚರಿಕೆ ತೆಗೆದುಕೊಳ್ಳದೆ ಇರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಈ ಕುರಿತು ಶಿವಮೊಗ್ಗ ಲೈವ್.ಕಾಂ ವರದಿ ಮಾಡಿತ್ತು. ಫೋಟೊ ಸಹಿತ ಸುದ್ದಿಗಾಗಿ ಕ್ಲಿಕ್‌ ಮಾಡಿ. ಶಿವಮೊಗ್ಗದ ಈ ಹೆದ್ದಾರಿಗೆ ಇನ್ನೆಷ್ಟು ಬಲಿ ಬೇಕು? ಇನ್ನಾದರೂ ಎಚ್ಚೆತ್ತುಕೊಳ್ತಾರಾ ಅಧಿಕಾರಿಗಳು?

ದೊಡ್ಡ ಅಪಘಾತ ಸಂಭವಿಸುವ ಮೊದಲೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕಿದೆ.

million%20page%20views

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 13, 2023

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment