SORABA NEWS, 17 NOVEMBER 2024 : ಮನೆಯ (House) ಹೆಂಚು ತೆಗೆದು ಕಳವು ಮಾಡಿದ್ದ ಆರೋಪಿಯನ್ನು ಬಂಧಿಸಿರುವ ಪೊಲೀಸರು ಆತನಿಂದ 50 ಸಾವಿರ ರೂ. ಮೌಲ್ಯದ ಆಭರಣ ಮತ್ತು 50 ಸಾವಿರ ರೂ. ನಗದು ವಶಕ್ಕೆ ಪಡೆದಿದ್ದಾರೆ.➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.
ಪಟ್ಟಣದ ಅಂಬೇಡ್ಕರ್ ಬಡಾವಣೆಯ ನಿವಾಸಿ ಗೋಪಿ ದೇವೇಂದ್ರಪ್ಪ ಬಂಧಿತ. ಒಂದು ತಿಂಗಳ ಹಿಂದೆ ಕಾನುಕೇರಿ ಬಡಾವಣೆಯ ನಾಗರಾಜ್ ಅವರ ಮನೆಯಲ್ಲಿ ಯಾರೂ ಇಲ್ಲದಾಗ ಮನೆಯ ಹೆಂಚು ತೆಗೆದು ಕಳ್ಳತನ ಮಾಡಿದ್ದ. ಈ ಸಂಬಂಧ ಪ್ರಕರಣ ದಾಖಲಾಗಿತ್ತು. ಆರೋಪಿಯನ್ನು ನ್ಯಾಯಾಂಗದ ವಶಕ್ಕೆ ಒಪ್ಪಿಸಲಾಗಿದೆ. ಸೊರಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಖಾಸಗಿ ಬಸ್ ನಿಲ್ದಾಣ, ಪಾರ್ಸಲ್ ಕೊಟ್ಟು ಹಿಂತಿರುಗಿದ ಯುವಕನಿಗೆ ಕಾದಿತ್ತು ಶಾಕ್