ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 11 APRIL 2023
SHIMOGA : ಗನ್ ತೋರಿಸಿ ಬೈಕ್ ಡೀಲರ್ ಒಬ್ಬನಿಗೆ ಬೆದರಿಕೆ ಒಡ್ಡಿದ್ದ ಆರೋಪಿಯನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದಾರೆ. ಆತನಿಂದ ಏರ್ ಗನ್ (Air Gun), ಪಿಸ್ತೂಲು, ಗುಂಡುಗಳು, ಡ್ರಗ್ ಮಿಶ್ರಿತ ಮೋನೋಕಾಫ್ ಪ್ಲಸ್ ಬಾಟಲಿಗಳನ್ನು ವಶಕ್ಕೆ ಪಡೆಯಲಾಗಿದೆ.

ಇಲಿಯಾಜ್ ನಗರದ ಮೊಹಮ್ಮದ್ ಅಜರ್ ಅಲಿಯಾಸ್ ಅಜರ್ (25) ಬಂಧಿತ. ಅಣ್ಣಾನಗರದ ಮೊಹಮ್ಮದ್ ರಿಯಾಬ್ ಎಂಬುವವರು ದ್ವಿಚಕ್ರ ವಾಹನಗಳ ಡೀಲರ್. ರಿಯಾಬ್ ಬಳಿ ಅಜರ್ ದ್ವಿಚಕ್ರ ವಾಹನ ಖರೀದಿಸಿದ್ದು, ಹಣ ಕೊಟ್ಟಿರಲಿಲ್ಲ. ಹಣ ಕೇಳಿದ್ದಕ್ಕೆ ರಿಯಾಬ್ಗೆ ಅಜರ್ ಗನ್ ತೋರಿಸಿ ಬೆದರಿಸಿ, ಹಲ್ಲೆ ಮಾಡಿದ್ದ.
ಇದನ್ನೂ ಓದಿ – ಆಸ್ಪತ್ರೆಯ ಪಕ್ಕದ ಬೆಡ್ನಲ್ಲಿದ್ದವಳು ಸಾಮಾನ್ಯಳಲ್ಲ, ಬಣ್ಣದ ಮಾತಿಗೆ ಶಿವಮೊಗ್ಗದ ಮಹಿಳೆ ಕಳೆದುಕೊಂಡಳು ಲಕ್ಷ ಲಕ್ಷ
ವಿಶೇಷ ತಂಡ ರಚನೆ
ಗನ್ ತೋರಿಸಿ ಬೆದರಿಕೆ ಒಡ್ಡಿದ ವಿಚಾರ ತಿಳಿಯುತ್ತಿದ್ದಂತೆ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರು ಅಜರ್ ಬಂಧನಕ್ಕೆ ವಿಶೇಷ ತಂಡ ರಚಿಸಿದ್ದರು. ಡಿವೈಎಸ್ಪಿ ಬಾಲರಾಜ್ ಅವರ ಮೇಲ್ವಿಚಾರಣೆಯಲ್ಲಿ ದೊಡ್ಡಪೇಟೆ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಅಂಜನ್ ಕುಮಾರ್, ಪಿಎಸ್ಐ ವಸಂತ ಅವರ ನೇತೃತ್ವದಲ್ಲಿ ಎಎಸ್ಐ ಮಂಜುನಾಥ್, ಎಎಸ್ಐ ಚೂಡಾಮಣಿ, ಸಿಬ್ಬಂದಿ ರಮೇಶ್, ರೌಡಿ ನಿಗ್ರಹ ದಳದ ಸಿಬ್ಬಂದಿ ಹಾಲಪ್ಪ, ಮನೋಹರ್, ಗುರುನಾಯ್ಕ, ನಾಗಪ್ಪ, ಹರೀಶ್ ನಾಯ್ಕ, ವಸಂತ, ರಮೇಶ್, ಆಕಾಶ್, ಶರತ್ ಮತ್ತು ತಮ್ಮಣ್ಣ ಅವರ ತಂಡ ರಚಿಸಲಾಗಿತ್ತು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಹಾಡಹಗಲೆ ಗನ್ ತೋರಿಸಿ ಬೈಕ್ ಡೀಲರ್ಗೆ ಬೆದರಿಕೆ
ಏರ್ ಗನ್, ಕಂಟ್ರಿ ಪಿಸ್ತೂಲು
ತನಿಖಾ ತಂಡ ಅಜರ್ ಅಲಿಯಾಸ್ ಮೊಹಮ್ಮದ್ ಅಜರ್ನನ್ನು ಬಂಧಿಸಿದೆ. ವಿಚಾರಣೆ ಮಾಡಿದಾಗ ಅಕ್ರಮವಾಗಿ ಶಸ್ತ್ರಾಸ್ತ್ರ ಹೊಂದಿರುವುದನ್ನು ಬಾಯಿ ಬಿಟ್ಟಿದ್ದಾನೆ. ಆರೋಪಿಯಿಂದ ಒಂದು ಕಂಟ್ರಿ ಮೇಡ್ ಪಿಸ್ತೂಲು, ಏರ್ ಗನ್, ಏರ್ ಗನ್ (Air Gun) ಗುಂಡುಗಳು, 100 ಎಂಎಲ್ನ ಡ್ರಗ್ ಮಿಶ್ರಿತವಿರುವ ಮೋನೋಕಾಫ್ ಪ್ಲಸ್ನ ಒಟ್ಟು 156 ಬಾಟಲಿಗಳನ್ನು ವಶಕ್ಕೆ ಪಡೆಯಲಾಗಿದೆ.
LATEST NEWS
- ಸಾವಿನಲ್ಲು ಸಾರ್ಥಕತೆ ಮೆರೆದ ಶಿರಾಳಕೊಪ್ಪದ ಯುವಕ, ಬಹು ಅಂಗಾಂಗ ದಾನ, ಆಗಿದ್ದೇನು?

- ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ನಟಿ ರಂಜನಿ ರಾಘವನ್ ಉಪನ್ಯಾಸ, ಯಾವಾಗ? ಏನು ವಿಷಯ?

- ‘ಶಾಸಕರಿಗೆ ಹೇಳಿ ನೀನೆ ತಡೆದಿದ್ದೀಯ’ ಎಂದು ಆರೋಪಿಸಿ ವ್ಯಕ್ತಿ ಮೇಲೆ ಚಪ್ಪಲಿಯಿಂದ ಹಲ್ಲೆ, ಏನಿದು ಪ್ರಕರಣ?

- ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಬಯಲು ಕುಸ್ತಿ, ಹೇಗಿತ್ತು ಎರಡನೇ ದಿನದ ಕಾದಾಟ? ಯಾರೆಲ್ಲ ಗೆದ್ದರು?

- ತೀರ್ಥಹಳ್ಳಿಯಲ್ಲಿ ಫಾರ್ಚುನರ್ ಕಾರಿನಲ್ಲಿ ಬಂದು ಇಂಜಿನಿಯರ್ಗೆ ಬೆದರಿಸಿ ಹಣ ವಸೂಲಿ, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು

CLICK HERE TO JOIN SHIVAMOGGA LIVE WHATSAPP GROUP



