ಸಕ್ರೆಬೈಲು ಬಳಿ ಮರಕ್ಕೆ ಡಿಕ್ಕಿಯಾಗಿ ಧಗಧಗ ಉರಿದ ಕಾರು, ಯುವಕ ಸಾವು

Published On : ಜನವರಿ 18, 2022

Published By : ನಿತಿನ್‌ ಆರ್‌.ಕೈದೊಟ್ಲು 

ಶಿವಮೊಗ್ಗದ ಲೈವ್.ಕಾಂ | SHIMOGA NEWS | 18 ಜನವರಿ 2022

ಸಕ್ರೆಬೈಲು ಸಮೀಪ ಮರಕ್ಕೆ ಕಾರು ಡಿಕ್ಕಿಯಾಗಿ, ಬೆಂಕಿ ಹೊತ್ತುಕೊಂಡ ಪ್ರಕರಣದಲ್ಲಿ ಯುವಕನೊಬ್ಬ ಮೃತಪಟ್ಟಿದ್ದಾನೆ.

AVvXsEjubsOilkhgq8SzYrg6f IdYVyFT33nAzTObPTO7g2mSz1bI1BgniDqmB4x0HK8nFq9AA8jkGiIzpjJBFT6QW sE542jUkz81YOwNkKrn9VhvNWib4U auKCyVAbPTmJGqoC1JFWnN355YeV 7vd8h okX5bUuHGgBqiG1kMPmUapD4rPa2q sp LbzqQ=s926

ಶಿವಮೊಗ್ಗದ ವೆಂಕಟೇಶನಗರದ ಸನತ್ (22) ಮೃತ ದುರ್ದೈವಿ. ಭದ್ರಾವತಿಯ ರುದ್ವಿಕ್ ಮತ್ತು ಅನೋಕ್ ಎಂಬುವವರು ಗಾಯಗೊಂಡಿದ್ದಾರೆ. ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮಂಡಗದ್ದೆಯಿಂದ ಮರಳುತ್ತಿದ್ದರು

ಮೂವರು ಯುವಕರು ಮಂಡಗದ್ದೆಗೆ ತೆರಳಿದ್ದರು. ಊಟ ಮುಗಿಸಿ ಮರಳುತ್ತಿದ್ದಾಗ ಸಕ್ರೆಬೈಲು ಬಳಿ ಕಾರು ಮರಕ್ಕೆ ಡಿಕ್ಕಿಯಾಗಿದೆ. ಅಪಘಾತದಲ್ಲಿ ಮೂವರಿಗೂ ಗಾಯವಾಗಿದೆ. ಗಂಭೀರ ಗಾಯಗೊಂಡಿದ್ದ ಸನತ್ ಮೃತಪಟ್ಟಿದ್ದಾನೆ. ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳೀಯರು ಮೂವರನ್ನು ಕಾರಿನಿಂದ ಹೊರಗೆಳೆದು ಆಸ್ಪತ್ರೆಗೆ ರವಾನಿಸಿದ್ದರು.

ಧಗಧಗ ಹೊತ್ತಿ ಉರಿದ ಕಾರು

ಅಪಘಾತಕ್ಕೀಡಾದ ಕಾರು ಧಗಧಗ ಹೊತ್ತಿ ಉರಿದಿದೆ. ಸ್ಥಳೀಯರು ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ಆದರೆ ಬೆಂಕಿಯ ಕೆನ್ನಾಲಗೆಗೆ ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ.

ತುಂಗಾ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಪಘಾತ ಸಂಬಂಧ ಪ್ರಕರಣ ದಾಖಲಾಗಿದೆ.

ABOUT ME NEW FINAL FINALshimoga,

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಜನವರಿ 18, 2022

Leave a Comment