SHIVAMOGGA LIVE NEWS | BUS ACCIDENT | 25 ಏಪ್ರಿಲ್ 2022
ಖಾಸಗಿ ಬಸ್’ನಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸಾಗರದ KSRTC ಬಸ್ ನಿಲ್ದಾಣದ ಬಳಿ ಘಟನೆ ಸಂಭವಿಸಿದೆ.
ಸಾಗರ ಪಟ್ಟಣದ ಅಗಡಿ ಮಠದ ನಿವಾಸಿ ಮಹಾದೇವ ನಾಯ್ಕ್ ಮೃತರು. ಕಾರ್ಗಲ್’ನಲ್ಲಿ ಹೊಟೇಲ್ ಕೆಲಸ ಮುಗಿಸಿ ರಾತ್ರಿ ಖಾಸಗಿ ಬಸ್’ನಲ್ಲಿ ಸಾಗರಕ್ಕೆ ಮರಳುವಾಗ ಘಟನೆ ಸಂಭವಿಸಿದೆ.
KSRTC ಬಸ್ ನಿಲ್ದಾಣ ಬಳಿ ಇಳಿಯಲು ಬಾಗಿಲು ಬಳಿ ಬಂದಾಗ, ಖಾಸಗಿ ಬಸ್ ಚಾಲಕ ಅಜಾಗರೂಕತೆ ಮತ್ತು ವೇಗವಾಗಿ ಚಲಿಸಿದ್ದಾನೆ. ಆಯಾತಪ್ಪಿ ರಸ್ತೆಗೆ ಬಿದ್ದ ಮಹಾದೇವ ನಾಯ್ಕ್ ಅವರ ತಲೆ ಮತ್ತು ಮುಖಕ್ಕೆ ಗಂಭೀರವಾಗಿ ಗಾಯವಾಗಿದೆ. ಕೂಡಲೆ ಅವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಯಿತು.
ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಖಾಸಿಗಿ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ ಚಿಕಿತ್ಸೆ ಫಲಿಸದೆ ಮಹಾದೇವ ನಾಯ್ಕ್ ಮೃತರಾಗಿದ್ದಾರೆ. ಸಾಗರ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ | ಶಿವಮೊಗ್ಗದಲ್ಲಿ ಕ್ಲಬ್ ಮೇಲೆ ದಾಳಿ, ಕಾರ್ಪೊರೇಟರ್ ಪತಿ, ಮಾಜಿ ಕಾರ್ಪೊರೇಟರ್ ಸೇರಿ ಹಲವರು ವಶಕ್ಕೆ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200