SHIVAMOGGA LIVE NEWS | 27 APRIL 2024
SHIMOGA : ಕ್ಷುಲಕ ವಿಚಾರಕ್ಕೆ ಜಗಳವಾಡಿ ಯುವಕನೊಬ್ಬನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಶಿವಮೊಗ್ಗದ ಬುದ್ದಾನಗರ 3ನೇ ಕ್ರಾಸ್ನಲ್ಲಿ ಘಟನೆ ಸಂಭವಿಸಿದೆ. ಪ್ಲಂಬಿಂಗ್ ಕೆಲಸ ಮಾಡುವ ಅಜಯ್ ಕುಮಾರ್ ಎಂಬಾತನ ಮೇಲೆ ಹಲ್ಲೆಯಾಗಿದೆ. ಲೋಹಿತ್ ಎಂಬಾತ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.
ಬುದ್ದಾನಗರದಲ್ಲಿ ನಿಂತಿದ್ದಾಗ ಅಜಯ್ ಕುಮಾರ್, ಲೋಹಿತ್ ಮಧ್ಯೆ ಕ್ಷುಲಕ ವಿಚಾರಕ್ಕೆ ಜಗಳವಾಗಿದೆ. ಈ ಸಂದರ್ಭ ಅಜಯ್ ಕುಮಾರ್ನ ತಲೆ, ಭುಜಕ್ಕೆ ಲೋಹಿತ್ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ಗಾಯಾಳುವಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಶಿವಮೊಗ್ಗ ಲೋಕಸಭೆ ಚುನಾವಣೆ, ಅಭ್ಯರ್ಥಿಗಳಿಗೆ ಸ್ವಂತ ವರದಿಗಾರರ ತಂಡ, ಕ್ಯಾಮರಾ ಟೀಮ್, ಏನಿವರ ಕೆಲಸ?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200