SHIVAMOGGA LIVE NEWS | ACCIDENT | 3 ಜೂನ್ 2022
ಬಸ್ಸಿನಿಂದ ಇಳಿಯುವಾಗ ಆಯಾತಪ್ಪಿ ಕೆಳಗೆ ಬಿದ್ದ ವೃದ್ಧನ ತಲೆ ಮೇಲೆ ಅದೇ ಬಸ್ಸಿನ ಚಕ್ರಗಳು ಚಲಿಸಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಾಲಕನ ನಿರ್ಲಕ್ಷ್ಯವೆ ಅಪಘಾತಕ್ಕೆ ಕಾರಣ ಎಂದು ಆರೋಪಿಸಲಾಗಿದೆ.
ಶಿಕಾರಿಪುರ ತಾಲೂಕು ಕಪ್ಪನಹಳ್ಳಿಯ ಬೂದ್ಯಪ್ಪ (60) ಮೃತ ದುರ್ದೈವಿ. ಶಿಕಾರಿಪುರದ ಎಸ್.ಎಸ್.ರಸ್ತೆಯಲ್ಲಿ ಘಟನೆ ಸಂಭವಿಸಿದೆ.
ಬೂದ್ಯಪ್ಪ ಅವರು ಶಿರಾಳಕೊಪ್ಪದಿಂದ ಶಿಕಾರಿಪುರಕ್ಕೆ ಆಗಮಿಸಿದ್ದರು. ಎಸ್.ಎಸ್.ರಸ್ತೆಯಲ್ಲಿ ಬಸ್ ನಿಲ್ಲಿಸಿದಾಗ ಬೂದ್ಯಪ್ಪ ಅವರು ಕೆಳಗೆ ಇಳಿಯುತ್ತಿದ್ದರು. ಈ ವೇಳೆ ಚಾಲಕ ಏಕಾಏಕಿ ಬಸ್ಸನ್ನು ಚಲಾಯಿಸಿದ್ದರಿಂದ ಬೂದ್ಯಪ್ಪ ಅವರು ಆಯಾತಪ್ಪಿ ಕೆಳಗೆ ಬಿದ್ದಿದ್ದಾರೆ. ಬಸ್ಸಿನ ಮುಂದಿನ ಚಕ್ರ ಬೂದ್ಯಪ್ಪ ಅವರ ತಲೆ ಮೇಲೆ ಹರಿದಿದೆ.
ಬೂದ್ಯಪ್ಪ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚಾಲಕ ಗಣೇಶ ಎಂಬಾತನ ಅಜಾಗರೂಕತೆಯಿಂದ ಅಪಘಾತ ಸಂಭವಿಸಿದೆ ಎಂದು ದೂರು ದಾಖಲಾಗಿದೆ. ಶಿಕಾರಿಪುರ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ – ರಾಗಿಗುಡ್ಡದಲ್ಲಿ 8 ಭಾರಿ ಸ್ಪೋಟ ಕೇಸ್, ಡಿಸಿ ಕಚೇರಿಗೆ ಸ್ಥಳೀಯರ ದೌಡು
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200