ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 9 SEPTEMBER 2023
SHIMOGA : ಚಿನ್ನದ ಅಂಗಡಿಯಲ್ಲಿ ನಕಲಿ ಬಂಗಾರ (Fake Gold) ಇಟ್ಟು ಅಸಲಿ ಬಂಗಾರ ಕಳವು ಮಾಡಿದ್ದ ಆರೋಪಿಯನ್ನು ದೊಡ್ಡಪೇಟೆ ಪೊಲೀಸರು ವರ್ಷದ ಬಳಿಕ ಬಂಧಿಸಿದ್ದಾರೆ. ಮತ್ತೊಬ್ಬ ಅರೋಪಿ ತಲೆಮರೆಸಿಕೊಂಡಿದ್ದಾಳೆ.
ಕೊಪ್ಪಳದ ಮೆಹಬೂಬ್ (25) ಬಂಧಿತ ಆರೋಪಿ, ಕಳೆದ ವರ್ಷ ಗಾಂಧಿಬಜಾರ್ನ ಬಸವೇಶ್ವರ ದೇವಸ್ಥಾನದ ಬಳಿಯಿರುವ ಬಂಗಾರದ ಅಂಗಡಿಗೆ ಬುರ್ಖಾ ಧರಿಸಿದ್ದ ಮಹಿಳೆ ಜತೆ ಬಂದು 11,500 ರೂ. ಮೌಲ್ಯದ ಚಿನ್ನಾಭರಣ ಖರೀದಿಸಿ ಹೋಗಿದ್ದ. ಮತ್ತೊಮ್ಮೆ ಬಂದ ಇಬ್ಬರೂ ಬೇರೆ ಒಡವೆಗಳನ್ನು ಖರೀದಿಸುವ ನೆಪದಲ್ಲಿ ಅಂಗಡಿಯಲ್ಲಿದ್ದ ಹುಡುಗನ ಗಮನ ಬೇರೆಡೆ ಸೆಳೆದು ಅಸಲಿ ಬಂಗಾರದ ಒಡವೆ ಜಾಗದಲ್ಲಿ, ಅದೇ ರೀತಿಯ ನಕಲಿ ಒಡವೆ ಇಟ್ಟು 85,900 ರೂ. ಮೌಲ್ಯದ ಚಿನ್ನಾಭರಣ ಕದ್ದು ಪರಾರಿಯಾಗಿದ್ದರು.
ಇದನ್ನೂ ಓದಿ – ಖಾಸಗಿ ಸಂಸ್ಥೆ ಡ್ಯೂಟಿ ಮ್ಯಾನೇಜರ್ ಮೇಲೆ ಗಾಂಧಿ ಬಜಾರ್ನಲ್ಲಿ ಹಲ್ಲೆ
ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡಪೇಟೆ ಪೊಲೀಸರು ಕೊಪ್ಪಳದಲ್ಲಿ ಹಸುವಿನ ವ್ಯಾಪಾರ ಮಾಡಿಕೊಂಡಿದ್ದ ಮೆಹಬೂಬ್ ಎಂಬಾತನನ್ನು ಬಂಧಿಸಿದ್ದಾರೆ.
ದೊಡ್ಡಪೇಟೆ ಠಾಣೆ ಇನ್ಸ್ಪೆಕ್ಟರ್ ಅಂಜನ್ ಕುಮಾರ್, ಪಿಎಸ್ಐಗಳಾದ ವಸಂತ್, ಶ್ರೀನಿವಾಸ್, ಎಎಸ್ಐ ಚಂದ್ರಶೇಖರ್, ಸಿಬ್ಬಂದಿ ಪಾಲಾಕ್ಷ ನಾಯಕ, ಲಚ್ಚಾನಾಯ್ಕ ಚಂದ್ರನಾಯ್ಕ, ನಿತಿನ್, ರಮೇಶ್ ಅವರ ತಂಡ ಕಾರ್ಯಾಚರಣೆ ನಡೆಸಿದೆ. ಮತ್ತೊಬ್ಬ ಆರೋಪಿ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






