SHIMOGA NEWS, 27 NOVEMBER 2024
ಕುಂಸಿ : ಮಗನ ಸಾವಿನಿಂದ ಖಿನ್ನತೆಗೆ ಒಳಗಾಗಿದ್ದ ವ್ಯಕ್ತಿಯೊಬ್ಬರು ಮನೆಯಲ್ಲಿ ಯಾರೂ ಇಲ್ಲದಾಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿವಮೊಗ್ಗ ತಾಲೂಕು ಕುಂಸಿಯ ಕನಕನಗರ ನಿವಾಸಿ ಮಂಜುನಾಥ (35) ಸೀರೆಯಿಂದ (Saree) ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ.
ಮಂಜುನಾಥ್ ಅವರ ಪತ್ನಿ ಶಿಲ್ಪಾ ಪಕ್ಕದಲ್ಲೇ ಇದ್ದ ಮಾವನ ಮನೆಗೆ ತೆರಳಿದ್ದಾಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂರು ವರ್ಷದ ಹಿಂದೆ ರಾಷ್ಟ್ರೀಯ ಹೆದ್ದಾರಿ ದಾಟುವಾಗ ವಾಹನವೊಂದು ಡಿಕ್ಕಿ ಹೊಡೆದು ಮಗ ಮೃತಪಟ್ಟಿದ್ದ. ಇದರಿಂದ ಮಂಜುನಾಥ್ ಖಿನ್ನತೆಗೆ ಒಳಗಾಗಿದ್ದರು. ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಹೋರಿ ಬೆದರಿಸುವ ಸ್ಪರ್ಧೆ, ಚರಂಡಿಗೆ ಬಿದ್ದು ಯುವಕ ಸಾವು







