ಕವರ್‌ನಲ್ಲಿ ಪೆಟ್ರೋಲ್‌ ತಂದು ಅಂಗಡಿ ಮಾಲೀಕನ ಮೇಲೆ ಎಸೆದು ಬೆಂಕಿ ಹಚ್ಚಿ ಪರಾರಿಯಾದ ವ್ಯಕ್ತಿ

 ಶಿವಮೊಗ್ಗ  LIVE 

ಶಿವಮೊಗ್ಗ: ವೈಯಕ್ತಿಕ ದ್ವೇಷಕ್ಕೆ ಚಿಕನ್‌ ಅಂಗಡಿ ಮಾಲೀಕನ ಮೇಲೆ ಪೆಟ್ರೋಲ್‌ (petrol) ಎರಚಿ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಲಾಗಿದೆ. ಸೋಮಿನಕೊಪ್ಪ ಸರ್ಕಲ್‌ನಲ್ಲಿ ಘಟನೆ ಸಂಭವಿಸಿದೆ.

ಚಿಕನ್‌ ಅಂಗಡಿ ಮಾಲೀಕ ಜೀಶಾನ್‌ ಕಿವಿ, ಎಡಗೈಗೆ ಬೆಂಕಿಯಿಂದ ಸುಟ್ಟ ಗಾಯವಾಗಿದೆ ಎಂದು ಆರೋಪಿಸಲಾಗಿದೆ. ಚಿಕನ್‌ ಅಂಗಡಿ ಬಳಿ ಬಂದಿದ್ದ ವಸೀಂ ಎಂಬಾತ ಜೀಶಾನ್‌ಗೆ ಅವಾಚ್ಯವಾಗಿ ನಿಂದಿಸಿದ್ದ. ಬಳಿಕ ಪ್ಲಾಸ್ಟಿಕ್‌ ಕವರ್‌ನಲ್ಲಿ ತಂದಿದ್ದ ಪೆಟ್ರೋಲ್‌ ಜೀಶಾನ್‌ ಮೈ ಮೇಲೆ ಎಸೆದು ಬೆಂಕಿ ಹಚ್ಚಿ ಓಡಿ ಹೋಗಿದ್ದಾನೆ ಎಂದು ಆರೋಪಿಸಲಾಗಿದೆ.

Sigandur-Janthre-2026-scaled.

ಕೂಡಲೆ ಸ್ಥಳೀಯರು ಜೀಶಾನ್‌ನನ್ನು ರಕ್ಷಿಸಿ ಮೆಗ್ಗಾನ್‌ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆ ಸಂಬಂಧ ವಿನೋಬನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಶಿವಮೊಗ್ಗ ಹಾಪ್‌ಕಾಮ್ಸ್‌ಗೆ 15 ನಿರ್ದೇಶಕರು ಅವಿರೋಧ ಆಯ್ಕೆ, ವಿಜಯ್‌ಕುಮಾರ್‌ ಹ್ಯಾಟ್ರಿಕ್‌ ಸಾಧನೆ

petrol

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment