SHIVAMOGGA LIVE NEWS | 12 MARCH 2024
SHIMOGA : ಕೆಎಸ್ಆರ್ಟಿಸಿ ಬಸ್ ಹತ್ತುವಾಗ ವ್ಯಕ್ತಿಯೊಬ್ಬರ ಜೇಬಿನಿಂದ ಹಣ ಕಳ್ಳತನ ಮಾಡಲಾಗಿದೆ. ಬಸ್ಸಿನಲ್ಲಿ ಟಿಕೆಟ್ ಖರೀದಿಗೆ ಹಣಕ್ಕಾಗಿ ಜೇಬಿಗೆ ಕೈ ಹಾಕಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಭದ್ರಾವತಿ ಮಾಳೇನಹಳ್ಳಿಯ ಕಾಂತರಾಜ್ ಶಾಸ್ತ್ರಿ ಎಂಬುವವರು 16,500 ರೂ. ಕಳೆದುಕೊಂಡಿದ್ದಾರೆ. ಶಿವಮೊಗ್ಗದ ಟಿವಿ ಶೋ ರೂಂ ಒಂದರಲ್ಲಿ ಟಿವಿ ಖರೀದಿಗೆ ಕಾಂತರಾಜ್ ಶಾಸ್ತ್ರಿ ಆಗಮಿಸಿದ್ದರು. ಆದರೆ ಟಿವಿ ಖರೀದಿಸಲಾಗದೆ, ತರೀಕೆರೆಯ ಸಂಬಂಧಿಯ ಮನೆಗೆ ತೆರಳಲು ಶಿವಮೊಗ್ಗ ನಿಲ್ದಾಣದಲ್ಲಿ ಕೆಎಸ್ಆರ್ಟಿಸಿ ಬಸ್ ಹತ್ತಿದ್ದರು. ಈ ವೇಳೆ ಹಣ ಕಳ್ಳತನವಾಗಿದೆ ಎಂದು ಆರೋಪಿಸಿ ದೂರು ನೀಡಿದ್ದಾರೆ. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಕೋಟೆ ಮಾರಿಕಾಂಬ ಜಾತ್ರೆ ಕುರಿತು ನಿಮಗೆಷ್ಟು ಗೊತ್ತು? ಇಲ್ಲಿದೆ 10 ಪ್ರಮುಖ ಪಾಯಿಂಟ್