SHIVAMOGGA LIVE NEWS | 15 JANUARY 2024
HOLEHONNURU : ಹಸಿ ಅಡಿಕೆ ತುಂಬಿದ್ದ ಬೊಲೇರೊ ಪಿಕಪ್ ವಾಹನ ಪಲ್ಟಿಯಾಗಿ ಮೂವರು ಸಾವನ್ನಪ್ಪಿದ್ದಾರೆ. ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಚಿನ್ನಿಕಟ್ಟೆ ಜೋಗದ ಬಳಿಕ ಘಟನೆ ಸಂಭವಿಸಿದೆ.
ಭದ್ರಾವತಿ ತಾಲೂಕು ಚಂದನಕೆರೆಯ ಮಂಜುನಾಥ್ (40), ನಾಗರಾಜ್ (42) ಮತ್ತು ಗೌತಮ್ (18) ಮೃತಪಟ್ಟಿದ್ದಾರೆ.
ಅಪಘಾತ ಸಂಭವಿಸಿದ್ದು ಹೇಗೆ?
ಚಂದನಕೆರೆಯ ಅಡಿಕೆ ಖೇಣಿದಾರ ಬಸಪ್ಪ ಎಂಬುವವರು ಶಿಕಾರಿಪುರ ಸಮೀಪ ಅರಿಶಿನಗೆರೆ ಅಡಿಕೆ ತೋಟದಲ್ಲಿ ಅಡಿಕೆ ಕೊಯ್ಲು ಮಾಡಿಸಿದ್ದರು. ಇದಕ್ಕಾಗಿ ಏಳು ಮಂದಿ ತೆರಳಿದ್ದರು. ಕೊಯ್ಲು ಮುಗಿಸಿ ಚಂದನಕೆರೆಗೆ ಮರಳುತ್ತಿದ್ದಾಗ ಚಿನ್ನಿಕಟ್ಟೆ ಜೋಗದ ಬಳಿ ಚಾಲಕನ ನಿಯಂತ್ರಣ ತಪ್ಪಿ ಬೊಲೇರೋ ಪಿಕಪ್ ವಾಹನ ಪಲ್ಟಿಯಾಗಿದೆ.
ಇದನ್ನೂ ಓದಿ – ತುಂಗಾ ನದಿಯಲ್ಲಿ ಮುಳುಗಿದ್ದ ಯುವಕನ ಮೃತದೇಹ ಪತ್ತೆ
ಸ್ಥಳದಲ್ಲೆ ಇಬ್ಬರು, ಆಸ್ಪತ್ರೆಯಲ್ಲಿ ಒಬ್ಬರು ಸಾವು
ಮಂಜುನಾಥ್ ಮತ್ತು ನಾಗರಾಜ್ ಅವರು ಅಪಘಾತದ ಸ್ಥಳದಲ್ಲಿ ಗಂಭೀರ ಗಾಯಗೊಂಡು ಮೃತಪಟ್ಟಿದ್ದರು. ಗೌತಮ್ನನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾನೆ. ನಾಗರಾಜ್ ಮತ್ತು ಗೌತಮ್ ವರಸೆಯಲ್ಲಿ ಚಿಕ್ಕಪ್ಪ, ಮಗ ಆಗಬೇಕು.
ಇದನ್ನೂ ಓದಿ – ಶಿವಮೊಗ್ಗದ ರಿಂಗ್ ರಸ್ತೆಯಲ್ಲಿ ಬೈಕ್ ಸ್ಟಂಟ್, ಚಾಲಕನನ್ನು ಪತ್ತೆ ಹಚ್ಚಿ ಭಾರಿ ದಂಡ ಕಟ್ಟಿಸಿದ ಟ್ರಾಫಿಕ್ ಪೊಲೀಸ್
ಇನ್ನು, ಅಪಘಾತದಲ್ಲಿ ಇಬ್ಬರಿಗೆ ಗಂಭೀರ ಗಾಯವಾಗಿದೆ. ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200