ಶಿವಮೊಗ್ಗದ ಬಸ್‌ ನಿಲ್ದಾಣದಲ್ಲಿ ಯುವಕ ವಶಕ್ಕೆ, ಮೆಡಿಕಲ್‌ ಟೆಸ್ಟ್‌ ಬಳಿಕ ಅರೆಸ್ಟ್‌, ಕಾರಣವೇನು?

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ಶಿವಮೊಗ್ಗ: ಖಾಸಗಿ ಬಸ್‌ ನಿಲ್ದಾಣದಲ್ಲಿ ಪೊಲೀಸರು ಅನುಮಾನದ ಮೇರೆಗೆ ಯುವಕನನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢವಾಗಿದೆ. ಈ ಹಿನ್ನೆಲೆ ಯುವಕನನ್ನು ಬಂಧಿಸಲಾಗಿದೆ (Arrest).

ಶಿವಮೊಗ್ಗದ ಖಾಸಗಿ ಬಸ್‌ ನಿಲ್ದಾಣದ ಪೊಲೀಸರು ಗಸ್ತು ಮಾಡುವಾಗ 3ನೇ ಪ್ಲಾಟ್‌ಫಾರಂನಲ್ಲಿ ದರ್ಶನ್‌ ಎಂಬಾತ ಅಮಲಿನಲ್ಲಿದ್ದಂತೆ ಕಾಣಿಸಿತು. ಆತನನ್ನು ವಶಕ್ಕೆ ಪಡೆದು ಮೆಗ್ಗಾನ್‌ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಯಿತು. ಈ ವೇಳೆ ಆತ ಗಾಂಜಾ ಸೇವನೆ ಮಾಡಿರುವುದು ದೃಢವಾಗಿದೆ. ಈ ಹಿನ್ನೆಲೆ ದೊಡ್ಡಪೇಟೆ ಠಾಣೆ ಪೊಲೀಸರು ದರ್ಶನನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪುರಲೆಯಲ್ಲಿ ಗಾಂಜಾ ವ್ಯಸನಿಗಳು ಅರೆಸ್ಟ್‌

ಪುರಲೆಯ ಅಪೂರ್ವ ಲೇಔಟ್‌ ಬಳಿ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಯುವಕರನ್ನು ವಶಕ್ಕೆ ಪಡೆದು ಮೆಗ್ಗಾನ್‌ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಗಾಂಜಾ ಸೇವನೆ ದೃಢವಾದ ಹಿನ್ನೆಲೆ ರಾಕೇಶ್‌, ಮೊಹಮದ್‌ ಹುಸೈನ್‌ ಎಂಬಾತನನ್ನು ಬಂಧಿಸಲಾಗಿದೆ. ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಮೀಟರ್‌ ರೀಡಿಂಗ್‌ಗೆ ತೆರಳಿದ್ದ ಮೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ, ಜೀವ ಬೆದರಿಕೆ, ಆಗಿದ್ದೇನು?

Arrest

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment