ಶಿವಮೊಗ್ಗ ಲೈವ್.ಕಾಂ | SHIMOGA NEWS | 23 JUNE 2021
ನಡುರಾತ್ರಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದವರ ವಿಚಾರಣೆ ನಡೆಸಿದ ಪೊಲೀಸರು ಇಬ್ಬರ ವಿರುದ್ಧ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಯುವಕನೊಬ್ಬನ ಕೈಯಲ್ಲಿ ಕಬ್ಬಿಣದ ರಾಡ್ ಇರುವುದು ಅನುಮಾನಕ್ಕೆ ಕಾರಣವಾಗಿತ್ತು.
ಶಿವಮೊಗ್ಗ ಲೈವ್.ಕಾಂ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಶಿವಮೊಗ್ಗದ ರಾಗಿಗುಡ್ಡದ ಚರ್ಚ್ ಬಳಿ ಇಬ್ಬರು ಯುವಕರು ಅನುಮಾನಾಸ್ಪದವಾಗಿ ಓಡಾಡುತ್ತಿದ್ದರು. ಈ ವೇಳೆ ಗಸ್ತು ತಿರುಗುತ್ತಿದ್ದ ಪೊಲೀಸರನ್ನು ಕಂಡು ಯುವಕರು ಪರಾರಿಯಾಗಲು ಯತ್ನಿಸಿದ್ದಾರೆ. ಅವರನ್ನು ತಡೆದು ವಿಚಾರಣೆ ನಡೆಸಿದ್ದಾರೆ.
ಒಬ್ಬ ಯುವಕನ ಕೈಯಲ್ಲಿ ಕಬ್ಬಿಣದ ರಾಡ್ ಇತ್ತು. ಅಲ್ಲದೆ ನಡುರಾತ್ರಿಯಲ್ಲಿ ಓಡಾಡಲು ಸ್ಪಷ್ಟ ಕಾರಣ ತಿಳಿಸದ ಹಿನ್ನೆಲೆ, ಇಬ್ಬರನ್ನು ವಶಕ್ಕೆ ಪಡೆಯಲಾಯಿತು. ಬಂಧಿತರನ್ನು ಶಿವಶಂಕರ್ ಮತ್ತು ಸಂದೀಪ್ ಕುಮಾರ್ ಎಂದು ಗುರುತಿಸಲಾಗಿದೆ.
ಗ್ರಾಮಾಂತರ ಠಾಣೆ ಪಿಎಸ್ಐ ಮಂಜುನಾಥ್, ಸಿಬ್ಬಂದಿಗಳಾದ ಯಶವಂತ, ಜಗದೀಶ್ ಅವರು ರಾತ್ರಿ ಗಸ್ತಿನಲ್ಲಿದ್ದಾಗ ಘಟನೆ ನಡೆದಿದೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]