ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಸೆಪ್ಟೆಂಬರ್ 2021
ಪೊಲೀಸ್ ಅಧಿಕಾರಿಯೊಬ್ಬರು ತಮ್ಮ ಮನೆ ಮುಂದೆ ನಿಲ್ಲಿಸಿದ್ದ ಬೈಕನ್ನೇ ಕಳ್ಳರು ಕದ್ದೊಯ್ದಿದ್ದಾರೆ. ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಜಿಲ್ಲಾ ಸಶಸ್ತ್ರ ಮೀಸಲು ಪಡೆಯ (ಡಿಎಆರ್) ಸಿಬ್ಬಂದಿ ರುಕ್ಮುದ್ದಿನ್ ಎಂಬುವವರಿಗೆ ಸೇರಿದ ಬೈಕ್ ಕಳ್ಳತನವಾಗಿದೆ. ರುಕ್ಮುದ್ದಿನ್ ಅವರು ಅಶೋಕನಗರದಲ್ಲಿರುವ ತಮ್ಮ ಬಾಡಿಗೆ ಮನೆ ಮುಂದೆ ಬೈಕ್ ನಿಲ್ಲಿಸಿ, ಊರಿಗೆ ತೆರಳಿದ್ದರು. ಆಗ ಕಳ್ಳರು ಬೈಕ್ ಕದ್ದೊಯ್ದಿದ್ದಾರೆ.
ಬೈಕ್ ನಾಪತ್ತೆ ಆಗಿರುವ ಕುರಿತು ಅವರ ಮನೆ ಮಾಲೀಕರು ಗಮನಿಸಿದ್ದರು. ಈ ಬಗ್ಗೆ ರುಕ್ಮುದ್ದಿನ್ ಅವರಿಗೆ ಕರೆ ಮಾಡಿ ತಿಳಿಸಿದ್ದಾರೆ. ಕೂಡಲೆ ಊರಿನಿಂದ ಹಿಂತಿರುಗಿದ್ದ ಅವರು ಪರಿಶೀಲಿಸಿದ್ದರು. ಆಗಸ್ಟ್ 19ರ ರಾತ್ರಿ ಘಟನೆ ಸಂಭವಿಸಿದ್ದು, ಎಲ್ಲಡೆ ಬೈಕಿಗಾಗಿ ಹುಡುಕಿದ ರುಕ್ಮುದ್ದಿನ್ ದೊಡ್ಡಪೇಟೆ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200