SHIMOGA, 31 AUGUST 2024 : ವಾಹನಗಳ ಇನ್ಷುರೆನ್ಸ್ (Insurance) ವಾಯಿದೆ ಮುಗಿದ್ದರೆ ತಕ್ಷಣ ರಿನಿವಲ್ ಮಾಡಿಸಿಕೊಳ್ಳಿ. ಸೆ.10ರ ನಂತರ ಇನ್ಷುರೆನ್ಸ್ ತಪಾಸಣೆ ಕಾರ್ಯಾಚರಣೆ ನಡೆಸಲಾಗುತ್ತದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ತಿಳಿಸಿದ್ದಾರೆ.
ಈ ಸಂಬಂಧ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಮಿಥುನ್ ಕುಮಾರ್, ಕಳೆದ ಎರಡ್ಮೂರು ವರ್ಷದಲ್ಲಿ ಅಪಘಾತದಲ್ಲಿ ಮೃತರಾದ ಹಲವರ ಕುಟುಂಬಕ್ಕೆ ಪರಿಹಾರ ಸಿಕ್ಕಿಲ್ಲ. ವಾಹನಗಳ ಇನ್ಷುರೆನ್ಸ್ ರಿನಿವಲ್ ಮಾಡಿಸದೆ ಇರುವುದು ಇದಕ್ಕೆ ಕಾರಣ. ಆದ್ದರಿಂದ ವಾಹನ ಸವಾರರು ಇನ್ಷುರೆನ್ಸ್ ರಿನಿವಲ್ ಮಾಡಿಸಬೇಕು. ಇದಕ್ಕಾಗಿ ಸೆ.10ರವರೆಗೆ ಕಾಲವಕಾಶ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.
![]() |
ಸೆ.10ರ ಬಳಿಕ ವಾಹನಗಳ ಇನ್ಷುರೆನ್ಸ್ ತಪಾಸಣೆಗಾಗಿ ವಿಶೇಷ ಕಾರ್ಯಾಚರಣೆ ನಡೆಸಲು ಪೊಲೀಸ್ ಇಲಾಖೆ ಸಿದ್ಧತೆ ನಡೆಸಿದೆ.
ಇದನ್ನೂ ಓದಿ ⇒ ಶಿವಮೊಗ್ಗ ಸಿಟಿಯ ಬಹುಭಾಗದಲ್ಲಿ ನಾಳೆ ಅರ್ಧ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200