ಶಿವಮೊಗ್ಗ: ಕೇಂದ್ರ ಸರ್ಕಾರದ ಮುದ್ರಾ ಯೋಜನೆ ಅಡಿಯಲ್ಲಿ ಸಬ್ಸಿಡಿ ಸಹಿತ ಭಾರಿ ಮೊತ್ತದ ಸಾಲ ಕೊಡಿಸುವುದಾಗಿ ನಂಬಿಸಿ ಪೊಲೀಸ್ ಅಧಿಕಾರಿಯೊಬ್ಬರಿಂದ ₹3.04 ಲಕ್ಷ ಆನ್ಲೈನ್ ಮೂಲಕ ವರ್ಗಾಯಿಸಿಕೊಂಡು ವಂಚಿಸಿರುವ ಘಟನೆ ನಗರದಲ್ಲಿ ನಡೆದಿದೆ. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.
ಪೊಲೀಸ್ ಅಧಿಕಾರಿಗೆ ಜೂನ್ 9ರಂದು ಕರೆ ಮಾಡಿದ್ದ ವ್ಯಕ್ತಿಯೊಬ್ಬ, ತಾನು ಮುದ್ರಾ ಲೋನ್ ವಿಭಾಗದ ಮ್ಯಾನೇಜರ್ ಎಂದು ಪರಿಚಯಿಸಿಕೊಂಡಿದ್ದ. ಯೋಜನೆಯಡಿ ₹5 ಲಕ್ಷ ಸಬ್ಸಿಡಿ ಇರುವ ₹25 ಲಕ್ಷ ಸಾಲ ಮಂಜೂರು ಮಾಡಿಸಿಕೊಡುವುದಾಗಿ ನಂಬಿಸಿ ಅವರ ಬ್ಯಾಂಕ್ ದಾಖಲೆಗಳನ್ನು ಪಡೆದುಕೊಂಡಿದ್ದ. ಸಾಲದ ಪ್ರಕ್ರಿಯೆಯ ವಿವಿಧ ಹಂತದ ಶುಲ್ಕಗಳ ನೆಪದಲ್ಲಿ ಜೂನ್ 9ರಿಂದ ಜೂನ್ 17ರ ಅವಧಿಯಲ್ಲಿ ಹಂತ ಹಂತವಾಗಿ ಒಟ್ಟು ₹3,04,000 ಹಣವನ್ನು ತನ್ನ ಖಾತೆಗೆ ವರ್ಗಾಯಿಸಿಕೊಂಡಿದ್ದ ಎಂದು ಆರೋಪಿಸಲಾಗಿದೆ.

ಹಣ ವರ್ಗಾವಣೆಯಾದ ಬಳಿಕವೂ ಲೋನ್ ಮಂಜೂರಾಗದಿದ್ದಾಗ ತಾವು ವಂಚನೆಗೊಳಗಾಗಿರುವುದು ಪೊಲೀಸ್ ಅಧಿಕಾರಿಗೆ ಮನವರಿಕೆಯಾಗಿದೆ. ಘಟನೆ ಕುರಿತು ಶಿವಮೊಗ್ಗದ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
