ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಜಾನುವಾರುಗಳನ್ನು ವಧೆ ಮಾಡಿ ಮಾಂಸ ಮಾರಾಟ ಮಾಡುತ್ತಿದ್ದ ಶೆಡ್ (shed) ಮೇಲೆ ತುಂಗಾನಗರ ಪೊಲೀಸರು ದಾಳಿ ನಡೆಸಿದ್ದಾರೆ. ಸೂಳೆಬೈಲಿನಲ್ಲಿ ನಿರ್ಮಿಸಿದ್ದ ಕಬ್ಬಿಣದ ಶೀಟ್ನ ಶೆಡ್ನಲ್ಲಿ ಈ ಕೃತ್ಯ ನಡೆಯುತ್ತಿತ್ತು.
ಖಚಿತ ಮಾಹಿತಿ ಮೇರೆಗೆ ಠಾಣಾ ಪ್ರಭಾರ ಪಿಎಸ್ಐ ಮೋಹನ್ ಕುಮಾರ್ ಅವರು ಪಶುವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ಭೇಟಿ ನೀಡಿದ್ದರು. ಶೆಡ್ ಒಳಗೆ ಪರಿಶೀಲಿಸಿದಾಗ ಕಡಪ ಕಲ್ಲಿನ ಮೇಲೆ ಪ್ರಾಣಿಯ ಮಾಂಸವನ್ನು ತುಂಡು ಮಾಡಿಟ್ಟಿರುವುದು ಮತ್ತು ಕಬ್ಬಿಣದ ಕೊಂಡಿಗಳಿಗೆ ಮಾಂಸ ನೇತು ಹಾಕಿರುವುದು ಕಂಡುಬಂದಿದೆ.

ಮೇಲ್ನೋಟಕ್ಕೆ ಇದು ಜಾನುವಾರುಗಳ ಮಾಂಸವೆಂದು ಪಶುವೈದ್ಯಾಧಿಕಾರಿಗಳು ದೃಢಪಡಿಸಿದ್ದಾರೆ. ಸ್ಥಳದಲ್ಲಿ ಪೊಲೀಸರು ಒಟ್ಟು 37 ಕೆ.ಜಿ. ಮಾಂಸ ವಶಕ್ಕೆ ಪಡೆಯಲಾಗಿದೆ. ಮಾಂಸ ಕತ್ತರಿಸಲು ಬಳಸುತ್ತಿದ್ದ ಕತ್ತಿ, ಚಾಕುಗಳು ಮತ್ತು ತೂಕ ಮಾಡುವ ಎಲೆಕ್ಟ್ರಾನಿಕ್ ಯಂತ್ರವನ್ನು ಜಪ್ತಿ ಮಾಡಲಾಗಿದೆ. ವಶಪಡಿಸಿಕೊಂಡ ಮಾಂಸ ಹಾಗೂ ಇತರ ವಸ್ತುಗಳ ಒಟ್ಟು ಮೌಲ್ಯ ಸುಮಾರು ₹9,201 ಎಂದು ಅಂದಾಜಿಸಲಾಗಿದೆ. ಪೊಲೀಸರು ದಾಳಿ ನಡೆಸುತ್ತಿದ್ದಂತೆ ಒಳಗಿದ್ದ ವ್ಯಕ್ತಿ ಪರಾರಿಯಾಗಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಬಂಕ್ ಮಾಲೀಕರಿಗೆ ಶಿವಮೊಗ್ಗ ಜಿಲ್ಲಾಧಿಕಾರಿ ಖಡಕ್ ಎಚ್ಚರಿಕೆ, ಏನಿದು?

LATEST NEWS
- ಭದ್ರಾವತಿಯಲ್ಲಿ ತವರಿಗೆ ಮರಳಿದ ಯೋಧನಿಗೆ ಅದ್ಧೂರಿ ಸ್ವಾಗತ

- ಸೂಳೆಬೈಲಿನಲ್ಲಿ ಶೆಡ್ ಮೇಲೆ ತುಂಗಾ ನಗರ ಠಾಣೆ ಪೊಲೀಸರ ದಾಳಿ, ದಾಖಲಾಯ್ತು ಕೇಸ್

- ಹಿಟ್ಟೂರು ಸರ್ಕಲ್ನಲ್ಲಿ ಬೈಕುಗಳು ಡಿಕ್ಕಿ, ಹೇಗಾಯ್ತು ಘಟನೆ?

- ಕೆನರಾ ಬ್ಯಾಂಕ್ ವಿರುದ್ಧ ಹೋರಾಡಿ ಗೆದ್ದ ಹೊಸನಗರದ ಗ್ರಾಹಕ, ಏನಿದು ಕೇಸ್?

- ಶಿವಮೊಗ್ಗದ 6 ಕಡೆ ಲೋಕಾಯುಕ್ತ ದಾಳಿ, ಅಧಿಕಾರಿ ಶೋಭಾ ಬಳಿ ಏನೇನೆಲ್ಲ ಸಿಕ್ತು? ಇಲ್ಲಿದೆ ಡಿಟೇಲ್ಸ್

About The Editor
ನಿತಿನ್ ಆರ್.ಕೈದೊಟ್ಲು










