ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ನವೆಂಬರ್ 2021
ತೂರುಬಿಲ್ಲೆ ಜೂಜಾಟ ಆಡಿಸುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ನಾಲ್ವರನ್ನು ಬಂಧಿಸಲಾಗಿದ್ದು, ಅವರಿಂದ ಜೂಜಿಗೆ ತೊಡಗಿಸಿದ್ದ ಹಣವನ್ನು ವಶಕ್ಕೆ ಪಡೆಯಲಾಗಿದೆ.
ಗಾಜನೂರು ಗ್ರಾಮದ ದೊಡ್ಡ ಚಾನಲ್ ಹತ್ತಿರ ದಾಳಿ ನಡೆಸಲಾಗಿದೆ. ತೂರುಬಿಲ್ಲೆ ಆಟ ಆಡಿಸುತ್ತಿದ್ದ ಆರೋಪದ ಮೇಲೆ ಮೋಹನ್ (47), ದೀಪಕ್ (39), ಕೃಷ್ಣಪ್ಪ (64) ಮತ್ತು ಕುಮಾರ್ (21) ಎಂಬುವವರನ್ನು ಬಂಧಿಸಲಾಗಿದೆ.
ಹೇಗಾಯ್ತು ದಾಳಿ?
ದೊಡ್ಡ ಚಾನಲ್ ಬಳಿ ತೂರುಬಿಲ್ಲೆ ಜೂಜಾಟ ಆಡಿಸುತ್ತಿರುವ ಖಚಿತ ಮಾಹಿತಿ ಮೇರೆಗೆ ತುಂಗಾ ನಗರ ಠಾಣೆ ಇನ್ಸ್ ಪೆಕ್ಟರ್ ದೀಪಕ್, ಎಎಸ್ಐ ನಾರಾಯಣ, ಸಿಬ್ಬಂದಿ ಅರುಣ್ ಕುಮಾರ್, ಚಂದ್ರಾನಾಯ್ಕ, ನಾಗರಾಜ್ ಅವರು ದಾಳಿ ನಡೆಸಿದರು.
ಪೊಲೀಸರನ್ನು ಕಂಡು ತೂರುಬಿಲ್ಲೆ ಆಟವಾಡುತ್ತಿದ್ದವರು ಪರಾರಿಯಾಗಿದ್ದಾರೆ. ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಬಂಧಿತರಿಂದ 27,042 ರೂ. ಹಣವನ್ನು ವಶಕ್ಕೆ ಪಡೆಯಲಾಗಿದೆ.
ಈ ಸಂಬಂಧ ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200