SHIVAMOGGA LIVE NEWS | 8 ಮಾರ್ಚ್ 2022
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಅಂದರ್ ಬಾಹರ್ ಜೂಜಾಟ ಆಡುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಆರು ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.
ಗಾಜನೂರು ಮೊರಾರ್ಜಿ ವಸತಿ ಶಾಲೆ ಹಿಂಭಾಗದ ಖಾಲಿ ಜಾಗದಲ್ಲಿ ಜನರು ಗುಂಪು ಕಟ್ಟಿಕೊಂಡು ಜೂಜಾಟದಲ್ಲಿ ತೊಡಗಿದ್ದರು. ಇದರ ಖಚಿತ ಮಾಹಿತಿ ಆಧಾರದ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.
ಖಾಕಿ ಕಂಡು ಕಾಲ್ಕಿತ್ತರು
ಪೊಲೀಸರು ದಾಳಿ ನಡೆಸುತ್ತಿದ್ದಂತೆ ಜೂಜಾಟದಲ್ಲಿ ತೊಡಗಿದ್ದ ಆರು ಮಂದಿ ಪರಾರಿಯಾಗಿದ್ದಾರೆ. ಬೆನ್ನಟ್ಟಿದ ಪೊಲೀಸರು ಇಬ್ಬರನ್ನು ಹಿಡಿದುಕೊಂಡಿದ್ದಾರೆ. ಅವರನ್ನು ಪ್ರಕಾಶ್ ಮತ್ತು ಶರತ್ ಎಂದು ಗುರುತಿಸಲಾಗಿದೆ. ಇನ್ನು, ಪರಾರಿಯಾದ ಪಾಪಣ್ಣ, ಸಂದೀಪ, ಮನು, ಪ್ರಸನ್ನ ಎಂಬುವವರ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.
ಹಣ, ಇಸ್ಪೀಟ್ ಕಾರ್ಡ್ ಸೀಜ್
ಅಂದರ್, ಬಾಹರ್ ಆಟದಲ್ಲಿ ತೊಡಗಿಸಿದ್ದ 19,240 ರೂ. ನಗದು, ಇಸ್ಪೀಟ್ ಕಾರ್ಡುಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಸಂಬಂಧ ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಿಎಸ್ಐ ಶಿವಪ್ರಸಾದ್, ಸಿಬ್ಬಂದಿ ರಾಜು, ಸಂತೋಷ್, ಜಿಲಾನಿ, ಸಂತೋಷ್, ಚೇತನ್, ಶರತ್ಚಂದ್ರ, ಅರಿಹಂತ ಶಿರಹಟ್ಟಿ ದಾಳಿಯಲ್ಲಿ ಪಾಲ್ಗೊಂಡಿದ್ದರು.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
LATEST NEWS
- ರಾಜ್ಯವನ್ನೇ ಬೆಚ್ಚಿಬೀಳಿಸಿದ ಶಿವಮೊಗ್ಗದ ಡ್ರೈವರ್, 19 ಅಕೌಂಟ್, 25 ATM ಕಾರ್ಡ್, ₹55 ಕೋಟಿ ನಷ್ಟ, ಏನಿದು ಕೇಸ್?

- ಭದ್ರಾವತಿಯಲ್ಲಿ ಸಬ್ ಇನ್ಸ್ಪೆಕ್ಟರ್ಗಳ ಕಾಲಿನ ಮೂಳೆ, ಕೈ ಬೆರಳು ಕಟ್, ಆರೋಪಿ ಕಾಲಿಗೆ ಗುಂಡೇಟು

- ಶಿವಮೊಗ್ಗ ಜಿಲ್ಲೆಯಲ್ಲಿ ಮೈ ಸುಡುವ ಬಿಸಿಲಿನ ಜೊತೆಗೆ ಮೈ ನಡುಗಿಸುವ ಚಳಿ, ಇವತ್ತಿನ ಹವಾಮಾನ ವರದಿ

- ಶಿವಮೊಗ್ಗ ತಾಲೂಕಿನ ಹಲವೆಡೆ ಫೆಬ್ರವರಿ 8, 9 ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ನಂಜಪ್ಪ ಆಸ್ಪತ್ರೆಯಲ್ಲಿ ನಡುರಾತ್ರಿ ಚಿರತೆಗೆ ಸ್ಕ್ಯಾನಿಂಗ್, ಏನಿದು? ಹೇಗೆ ನಡೆಯಿತು ಪ್ರಕ್ರಿಯೆ?

About The Editor
ನಿತಿನ್ ಆರ್.ಕೈದೊಟ್ಲು






