ಅಧಿಕಾರಿಗಳು, ಪೊಲೀಸರಿಂದ ಶಿವಮೊಗ್ಗದ ಎನ್.ಟಿ.ರಸ್ತೆಯಲ್ಲಿ ದಾಳಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 05 ಅಕ್ಟೋಬರ್ 2021

ಪಡಿತರ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲು ಸಂಗ್ರಹಿಸಿಟ್ಟಿದ್ದ ಮಳಿಗೆ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಮುನ್ನೂರಕ್ಕೂ ಹೆಚ್ಚು ಮೂಟೆ ಅಕ್ಕಿಯನ್ನು ವಶಕ್ಕೆ ಪಡೆಯಲಾಗಿದೆ.

ಆಹಾರ ಮತ್ತು ನಾಗರಿಕ ಪಡಿತರ ಸರಬರಾಜು ಇಲಾಖೆ ಅಧಿಕಾರಿಗಳು, ದೊಡ್ಡಪೇಟೆ ಠಾಣೆ ಪೊಲೀಸರೊಂದಿಗೆ ದಾಳಿ ನಡೆಸಿದ್ದಾರೆ. ಈ ವೇಳೆ ಪಡಿತರ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲು ಸಂಗ್ರಹ ಮಾಡಿರುವುದು ಬೆಳಕಿಗೆ ಬಂದಿದೆ.

ಅಕ್ಕಿಯನ್ನು ಎಲ್ಲಿ ಸಂಗ್ರಹಿಸಿದ್ದರು?

ಖಚಿತ ಮಾಹಿತಿ ಮೇರೆಗೆ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದರು. ಶಿವಮೊಗ್ಗದ ಎನ್.ಟಿ.ರಸ್ತೆಯ ಪಾಲಕ್ ಪ್ಯಾಲೆಸ್ ಶಾದಿಮಹಲ್ ಕಟ್ಟಡದಲ್ಲಿ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿರುವುದು ಖಚಿತವಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರೊಂದಿಗೆ ದಾಳಿ ನಡೆಸಲಾಗಿತ್ತು.

LifeSpring%2BKan%2B02

ದಾಳಿ ವೇಳೆ 320 ಮೂಟೆ ಅಕ್ಕಿ ಪತ್ತೆಯಾಗಿದೆ. ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಕಾರ್ಡ್ ಹೊಂದಿರುವವರಿಗೆ ವಿತರಿಸಬೇಕಾದ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲು ಸಂಗ್ರಹಿಸಲಾಗುತ್ತಿತ್ತು. ಈ ಸಂಬಂಧ ಸಯ್ಯದ್ ಮುಜೀಬುಲ್ಲಾ, ಸಯ್ಯದ್ ಮುಯೀನ್ ಮತ್ತು ಪಾಲಕ್ ಪ್ಯಾಲೆಸ್ ಶಾದಿ ಮಹಲ್ ಮಾಲೀಕನ ವಿರುದ್ಧ ಪ್ರಕರಣ ದಾಖಲಾಗಿದೆ. ಪೊಲೀಸರು ಲಾರಿಯನ್ನು ವಶಕ್ಕೆ ಪಡೆದಿದ್ದಾರೆ. ದೊಡ್ಡಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

1632381453891714 0

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ ಮೂಲಕ ಸುದ್ದಿಗಾಗಿ 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 5, 2021

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

Leave a Comment