ಶಿವಮೊಗ್ಗದ ಓ.ಟಿ.ರಸ್ತೆಯಲ್ಲಿ ಬೊಲೆರೋ ಪಿಕಪ್ ವಾಹನದ ಮೇಲೆ ಪೊಲೀಸರ ದಾಳಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 2 ಮಾರ್ಚ್ 2022

ಪಡಿತರ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲು ಕೊಂಡೊಯ್ಯುತ್ತಿದ್ದ ಬೊಲೇರೋ ಪಿಕಪ್ ವಾಹನದ ಮೇಲೆ ದಾಳಿ ನಡೆಸಲಾಗಿದೆ. ಖಚಿತ ಮಾಹಿತಿ ಮೇರೆಗೆ ಆಹಾರ ಇಲಾಖೆ ಅಧಿಕಾರಿಗಳು, ಪೊಲೀಸರ ನೆರವಿನೊಂದಿಗೆ ದಾಳಿ ನಡೆಸಿದ್ದಾರೆ.

ಶಿವಮೊಗ್ಗದ ಓ.ಟಿ.ರಸ್ತೆಯ ಆಜಾದ್ ನಗರದ 3ನೇ ತಿರುವಿನಲ್ಲಿ ದಾಳಿ ನಡೆಸಲಾಯಿತು.

ಹೇಗಾಯ್ತು ದಾಳಿ? ಎಷ್ಟು ಅಕ್ಕಿ ಸಿಕ್ತು?

ಬೊಲೆರೋ ಪಿಕಪ್ ವಾಹನದಲ್ಲಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಕೊಂಡೊಯ್ಯಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಫುಡ್ ಇನ್ಸ್ ಪೆಕ್ಟರ್ ಮತ್ತು ದೊಡ್ಡಪೇಟೆ ಠಾಣೆ ಪೊಲೀಸರು ದಾಳಿ ನಡೆಸಿದರು.

ಆಜಾದ್ ನಗರದ ಬಳಿ ಬೊಲೆರೋ ಪಿಕಪ್ ವಾಹನ ಬರುತ್ತಿದ್ದಂತೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಧಿಕಾರಿಗಳು, ಪೊಲೀಸರನ್ನು ಕಂಡ ಕೂಡಲೆ ಚಾಲಕ ಮತ್ತು ಪಕ್ಕದ ಸೀಟಿನಲ್ಲಿ ಕುಳಿತಿದ್ದವರು ವಾಹನ ನಿಲ್ಲಿಸಿ ಪರಾರಿಯಾಗಿದ್ದಾರೆ.

ವಾಹನದ ಪರಿಶೀಲನೆ ನಡೆಸಿದಾಗ 50 ಕೆ.ಜಿ. ತೂಕದ ಪ್ಲಾಸ್ಟಿಕ್ ಚೀಲದಲ್ಲಿ ಪಡಿತರ ಅಕ್ಕಿಯನ್ನು ತುಂಬಲಾಗಿತ್ತು. ಸುಮಾರು 80 ಪ್ಲಾಸ್ಟಿಕ್ ಚೀಲದಲ್ಲಿ ಅಕ್ಕಿ ತುಂಬಲಾಗಿತ್ತು. ಇದರ ಮೌಲ್ಯ ಸುಮಾರು 88 ಸಾವಿರ ರೂ. ಎಂದು ಅಂದಾಜಿಸಲಾಗಿದೆ.

ಈ ಸಂಬಂಧ ಸಯ್ಯದ್ ಮುಜೀಬುಲ್ಲಾ, ಸಯ್ಯದ್ ಮುಯಿನ್ ಮತ್ತು ಬೊಲೆರೋ ಪಿಕಪ್ ವಾಹನದ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ. ದೊಡ್ಡಪೇಟೆ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

ಇದನ್ನೂ ಓದಿ | ಶಿವಮೊಗ್ಗದಲ್ಲಿ ರಾತ್ರೋರಾತ್ರಿ 250 ಕೆ.ಜಿ. ಅಡಕೆ ನಾಪತ್ತೆ

Nanjappa Hospital Covid Care Center

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment