SHIVAMOGGA LIVE NEWS | 27 MARCH 2024
ಗಾಂಜಾ ಸೇವನೆ, ಇಬ್ಬರ ಬಂಧನ
SHIMOGA : ಶರಾವತಿ ನಗರ ಚಾನಲ್ ಬಳಿ ಗಾಂಜಾ ಸೇವನೆ ಮಾಡಿದ್ದ ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಗಸ್ತು ತಿರುಗುವ ವೇಳೆ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಯುವಕರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ವೈದ್ಯಕೀಯ ಪರೀಕ್ಷೆ ಬಳಿಕ ಇಬ್ಬರು ಗಾಂಜಾ ಸೇವಿಸಿರುವುದು ದೃಢವಾಗಿದೆ. ಈ ಹಿನ್ನೆಲೆ ಧನುಶ್ (22) ಮತ್ತು ಅಸ್ಗರ್ (29) ಎಂಬುವವರನ್ನು ಬಂಧಿಸಲಾಗಿದೆ. ವಿನೋಬನಗರ ಠಾಣೆಯಲ್ಲಿ ಎನ್ಡಿಪಿಎಸ್ ಕಾಯ್ದೆ ಅಡಿ ಪ್ರತ್ಯೇಕ ಪ್ರಕರಣ ದಾಖಲಾಗಿವೆ.
ಶಿವಮೊಗ್ಗ ತೀರ್ಥಹಳ್ಳಿ ರಸ್ತೆಯಲ್ಲಿ ಅಪಘಾತ, ಗಂಭೀರ ಗಾಯ
SHIMOGA : ಓಮ್ನಿ ಕಾರು ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾಗಿದ್ದು ಬೈಕ್ ಸವಾರನಿಗೆ ಗಂಭೀರ ಗಾಯವಾಗಿದೆ. ಶಿವಮೊಗ್ಗ – ತೀರ್ಥಹಳ್ಳಿ ಹೆದ್ದಾರಿಯ ಲಕ್ಷ್ಮೀಪುರ ತಾಂಡ ಬಸ್ ನಿಲ್ದಾಣದ ಬಳಿ ಘಟನೆ ಸಂಭವಿಸಿದೆ. ಶಿವಮೊಗ್ಗದಲ್ಲಿ ಕೆಲಸ ಮುಗಿಸಿಕೊಂಡು ವಿನೋದ್ ಕುಮಾರ್ ತಮ್ಮೂರು ಹೊಸಳ್ಳಿಗೆ ಮರಳುತ್ತಿದ್ದರು. ಈ ವೇಳೆ ಎದುರಿನಿಂದ ವೇಗವಾಗಿ ಬಂದ ಓಮ್ನಿ ಕಾರು ಡಿಕ್ಕಿ ಹೊಡೆದಿದೆ. ವಿನೋದ್ ಕುಮಾರ್ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಊರುಗಡೂರಿನಲ್ಲಿ ಪೊಲೀಸರ ದಾಳಿ
SHIMOGA : ಊರು ಗಡೂರಿನಲ್ಲಿ ಶೆಡ್ ಒಂದರಲ್ಲಿ ಗೋಮಾಂಸ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ಸಂದರ್ಭ ಪೊಲೀಸರನ್ನು ಕಂಡು ಶೆಡ್ನಲ್ಲಿದ್ದವರು ಪರಾರಿಯಾಗಿದ್ದಾರೆ. ಶೆಡ್ನಲ್ಲಿ ಸುಮಾರು 12 ಕೆ.ಜಿ. ತೂಕದ ಗೋಮಾಂಸ, ತಕ್ಕಡಿ, ಮಚ್ಚುಗಳು ಸೇರಿ ಸುಮಾರು 6 ಸಾವಿರ ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಕಲೀಂ ಎಂಬಾತನ ವಿರುದ್ಧ ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಶಿವಮೊಗ್ಗ KSRTC ನಿಲ್ದಾಣದಲ್ಲಿ ವ್ಯಕ್ತಿ ಸಾವು | ರೈಲಿಗೆ ಸಿಲುಕಿ ವ್ಯಕ್ತಿ ಮೃತ | ಡಿಕ್ಕಿ ಹೊಡೆಸಿ ಕಾರು ಬಿಟ್ಟು ಚಾಲಕ ಪರಾರಿ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200