ಶಿವಮೊಗ್ಗದ ನಾಲ್ಕು ಕಡೆ ಪೊಲೀಸರ ದಾಳಿ, ಆರು ಮಂದಿ ವಿರುದ್ಧ ಎಫ್ಐಆರ್

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 3 ಡಿಸೆಂಬರ್ 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಗೋಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಶಿವಮೊಗ್ಗದ ವಿವಿಧೆಡೆ ಪೊಲೀಸರು ದಾಳಿ ನಡೆಸಿದ್ದಾರೆ. ಅಂಗಡಿಗಳಿಗೆ ಬೀಗ ಹಾಕಿ ಪ್ರಕರಣ ದಾಖಲು ಮಾಡಲಾಗಿದೆ. ಇನ್ನಷ್ಟು ಕಡೆಗಳಲ್ಲಿ ಪೊಲೀಸರು ದಾಳಿ ನಡೆಸುವ ಸಾಧ್ಯತೆ ಇದೆ.

ADVT JULY NANJAPPA HOSPITAL HOME LAB TESTING

ಎಲ್ಲೆಲ್ಲಿ ದಾಳಿ ನಡೆಸಲಾಗಿದೆ?

ಶಿವಮೊಗ್ಗದ ಇಲಿಯಾಸ್ ನಗರದಲ್ಲಿದ್ದ ಕಸಾಯಿ ಖಾನೆ ಮೇಲೆ ದೊಡ್ಡಪೇಟೆ ಠಾಣೆ ಪೊಲೀಸರು ದಾಳಿ ನಡೆಸಿದ್ದಾರೆ. ಮಾಲೀಕನ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.

ಟಿಪ್ಪು ನಗರ ಮತ್ತು ಜೆಪಿ ನಗರದಲ್ಲಿ ತುಂಗಾ ನಗರ ಠಾಣೆ ಪೊಲೀಸರು ದಾಳಿ ಮಾಡಿದ್ದಾರೆ. ಮೂರು ಕಡೆ ದಾಳಿ ನಡೆಸಿ, ಕಸಾಯಿ ಖಾನೆಗಳನ್ನು ಬಂದ್ ಮಾಡಿಸಿದ್ದಾರೆ.

ಗೋಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಆರು ಮಂದಿ ವಿರುದ್ಧ ನಾಲ್ಕು ಪ್ರಕರಣ ದಾಖಲು ಮಾಡಲಾಗಿದೆ. ಇನ್ನು, ದಾಳಿ ವೇಳೆ ಕಳವು ಮಾಡಿ ತಂದಿದ್ದ 19 ಹಸುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ದೊಡ್ಡಪೇಟೆ ಮತ್ತು ತುಂಗಾ ನಗರ ಠಾಣೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಇನ್ನು, ಪೊಲೀಸರು ದಾಳಿ ನಡೆಸುತ್ತಿರುವ ವಿಚಾರ ತಿಳಿಯುತ್ತಿದ್ದಂತೆ ಶಿವಮೊಗ್ಗದ ವಿವಿಧೆಡೆ ಇದ್ದ ಕಸಾಯಿ ಖಾನೆಗಳು ಬಂದ್ ಆಗಿವೆ ಎಂದು ಹೇಳಲಾಗುತ್ತಿದೆ.

shivamogga live subscribe band

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment