ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 12 SEPTEMBER 2023
SHIMOGA : ಜಿಲ್ಲೆಯ ವಿವಿಧೆಡೆ ರೌಡಿಶೀಟರ್ಗಳ ಮನೆಗಳ ಮೇಲೆ ಸೋಮವಾರ ಬೆಳ್ಳಂಬೆಳಗ್ಗೆ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ. ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬಗಳ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಈ ದಾಳಿ ನಡೆಸಲಾಗಿದೆ.

241 ರೌಡಿಗಳ ಮನೆ ಬಾಗಿಲಿಗೆ ಪೊಲೀಸ್
ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ಕುಮಾರ್ ಸೇರಿದಂತೆ 7 ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಪ್ರತ್ಯೇಕ ತಂಡಗಳ ಮೂಲಕ ದಾಳಿ ನಡೆಸಲಾಯಿತು. ಒಟ್ಟು 241 ರೌಡಿಗಳ ಮನೆಗಳ ಬಾಗಿಲು ಬಡಿದ ಪೊಲೀಸರು ಹಬ್ಬಗಳ ವೇಳೆಯಲ್ಲಿ ಶಾಂತಿ ಕದಡುವ ಪ್ರಯತ್ನ ಮಾಡಿದರೆ ಕಾನೂನು ಕ್ರಮದ ಎಚ್ಚರಿಕೆ ನೀಡಿದರು.

ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ ಮಿಥುನ್ ಕುಮಾರ್ ನೇತೃತ್ವದಲ್ಲಿ, ಶಿವಮೊಗ್ಗ ಎ ಉಪ ವಿಭಾಗದ ಡಿವೈಎಸ್ಪಿ ಬಾಲರಾಜ್, ಶಿವಮೊಗ್ಗ ಬಿ ಉಪ ವಿಭಾಗದಲ್ಲಿ ಡಿವೈಎಸ್ಪಿ ಎಂ.ಸುರೇಶ್, ಭದ್ರಾವತಿ ಉಪ ವಿಭಾಗದಲ್ಲಿ ಪೊಲೀಸ್ ಉಪಾಧೀಕ್ಷಕ ನಾಗರಾಜ್, ಸಾಗರ ಉಪ ವಿಭಾಗದಲ್ಲಿ ಪೊಲೀಸ್ ಉಪಾಧೀಕ್ಷಕ ಗೋಪಾಲಕೃಷ್ಣ ತಿಮ್ಮಣ್ಣ ನಾಯ್ಕ, ಶಿಕಾರಿಪುರ ಉಪ ವಿಭಾಗದಲ್ಲಿ ಡಿವೈಎಸ್ಪಿ ಶಿವಾನಂದ್ ಮದರಖಂಡಿ ಮತ್ತು ತೀರ್ಥಹಳ್ಳಿ ಉಪ ವಿಭಾಗದಲ್ಲಿ ಡಿವೈಎಸ್ಪಿ ಗಜಾನನ ವಾಮನ ಸುತಾರ ಹಾಗೂ ಆಯಾ ಪೊಲೀಸ್ ಠಾಣೆಗಳ ಪೊಲೀಸ್ ಇನ್ಸ್ಪೆಕ್ಟರ್, ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹಾಗೂ ಸಿಬ್ಬಂದಿ ಒಳಗೊಂಡ ಪ್ರತ್ಯೇಕ ತಂಡಗಳು ಏಕಕಾಲದಲ್ಲಿ ದಾಳಿ ನಡೆಸಿದವು.

ಎಲ್ಲೆಲ್ಲಿ ಎಷ್ಟು ಕಡೆ ದಾಳಿ?
ಶಿವಮೊಗ್ಗ ಎ ಉಪ ವಿಭಾಗದಲ್ಲಿ 39, ಶಿವಮೊಗ್ಗ ಬಿ ಉಪ ವಿಭಾಗದಲ್ಲಿ 38, ಭದ್ರಾವತಿ ಉಪ ವಿಭಾಗದಲ್ಲಿ 72, ಸಾಗರ ಉಪ ವಿಭಾಗದಲ್ಲಿ 21, ಶಿಕಾರಿಪುರ ಉಪ ವಿಭಾಗದಲ್ಲಿ 27, ತೀರ್ಥಹಳ್ಳಿ ಉಪ ವಿಭಾಗದಲ್ಲಿ 44 ಸೇರಿ ಜಿಲ್ಲೆಯಾದ್ಯಂತ ಒಟ್ಟು 241 ರೌಡಿ ಶೀಟರ್ಗಳ ಮನೆಗಳನ್ನು ತಪಾಸಣೆ ನಡೆಸಲಾಯಿತು.

ರೌಡಿಗಳ ಹಾಜರಾತಿ, ಹಾಲಿ ಮಾಡುತ್ತಿರುವ ಕೆಲಸ, ಮನೆಯಲ್ಲಿ ಮಾದಕ ವಸ್ತು ಹಾಗೂ ಮಾರಕಾಸ್ತ್ರಗಳನ್ನು ಇಟ್ಟುಕೊಂಡಿರುವ ಬಗ್ಗೆ ಪರಿಶೀಲನೆ ನಡೆಸಲಾಯಿತು. ಇತ್ತೀಚಿನ ಅವರ ಕಾರ್ಯ ಚಟುವಟಿಕೆಯ ಮಾಹಿತಿಯನ್ನೂ ಪೊಲೀಸರು ಪಡೆದುಕೊಂಡರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಕಾರಿನ ಚಕ್ರದ ಮೇಲೆ ಮೂತ್ರ ವಿಸರ್ಜಿಸಿದ ಬೀದಿ ನಾಯಿ, ಕೈ ಕೈ ಮಿಲಾಯಿಸಿದ ಎರಡು ಕುಟುಂಬ
LATEST NEWS
- ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

- ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್ 2026

- ಗಾಂಧಿ ಬಜಾರ್ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್, ಏನಿದು ಕೇಸ್?

- ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

- ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್

About The Editor
ನಿತಿನ್ ಆರ್.ಕೈದೊಟ್ಲು















