ದರ್ಶನ್‌ ಸಹಚರರು ಆಗಮನಕ್ಕು ಮುನ್ನವೆ ಶಿವಮೊಗ್ಗ ಜೈಲಿನ ಮೇಲೆ 120 ಪೊಲೀಸರಿಂದ ದಾಳಿ

SHIMOGA NEWS, 28 AUGUST 2024 : ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳು ಎಂಟ್ರಿಗೆ ಮೊದಲು ಶಿವಮೊಗ್ಗ ಪೊಲೀಸರು ಕೇಂದ್ರ ಕಾರಾಗೃಹದ ಮೇಲೆ ದಿಢೀರ್‌ ದಾಳಿ (RAID) ನಡೆಸಿದ್ದಾರೆ. ಇವತ್ತು ಬೆಳ್ಳಂಬೆಳಗ್ಗೆ 120ಕ್ಕೂ ಹೆಚ್ಚು ಪೊಲೀಸರು ದಾಳಿ ನಡೆಸಿದ್ದಾರೆ.➤ ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ನೇತೃತ್ವದಲ್ಲಿ ಇಂದು ಬೆಳಗ್ಗೆ ಜೈಲಿನ ಮೇಲೆ ದಾಳಿ ನಡೆಸಲಾಯಿತು. ಎಲ್ಲಾ ಬ್ಯಾರಕ್‌ ಮತ್ತು ಸೆಲ್‌ಗಳಲ್ಲಿ ಪೊಲೀಸರು ತಪಾಸಣೆ ನಡೆಸಿದರು. ಬೀಡಿ, ಸಿಗರೇಟು ಹೊರತು ಯಾವುದೇ ನಿಷೇಧಿತ ವಸ್ತುಗಳು ಪತ್ತೆಯಾಗಿಲ್ಲ ಎಂದು ತಿಳಿದು ಬಂದಿದೆ.

210724 Police Raid on Shimoga central Jail at Sogane

FILE PHOTO

ಇನ್ನು, ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್‌ ಮತ್ತು ಇತರೆ ಆರೋಪಿಗಳನ್ನು ರಾಜ್ಯದ ವಿವಿಧ ಜೈಲುಗಳಿಗೆ ವರ್ಗಾಯಿಸಲಾಗುತ್ತಿದೆ. ಆರೋಪಿಗಳಾದ ಜಗದೀಶ್‌ ಮತ್ತು ಲಕ್ಷ್ಮಣನನ್ನು ಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ ಬೆಂಗಳೂರಿನಿಂದ ರವಾನಿಸಲಾಗಿದೆ. ಈ ಆರೋಪಿಗಳು ಬರುವ ಮುನ್ನವೆ ಪೊಲೀಸರು ಜೈಲಿನ ಮೇಲೆ ದಾಳಿ ನಡೆಸಿರುವುದು ಮಹತ್ವ ಪಡೆದುಕೊಂಡಿದೆ.

ಇದನ್ನೂ ಓದಿ ⇒ ಸೇತುವೆಯಿಂದ ಕೆಳಗೆ ಹಾರಿದ ಕಾರು | ಬಸ್‌ ಗುದ್ದಿ ಎಮ್ಮೆಗಳು ಸಾವು – 3 ಫಟಾಫಟ್‌ ನ್ಯೂಸ್‌

Leave a Comment