ಭದ್ರಾವತಿ : ಪಿಸ್ತೂಲ್ ಮತ್ತು ಡ್ರಾಗರ್ನಿಂದ ಪೊಲೀಸರ ಮೇಲೆ ದಾಳಿಗೆ ಯತ್ನಿಸಿದ ಆರೋಪಿಯೊಬ್ಬನ ಕಾಲಿಗೆ ಪೊಲೀಸರು ಗಂಡು ಹಾರಿಸಿದ್ದಾರೆ. ನ್ಯೂ ಟೌನ್ ಠಾಣೆ ಸಬ್ ಇನ್ಸ್ಪೆಕ್ಟರ್ ಬಂದೂಕಿನಿಂದ ಹಾರಿದ ಗುಂಡು ಆರೋಪಿ ನಸ್ರು ಅಲಿಯಾಸ್ ನಸ್ರುಲ್ಲಾ ಎಂಬಾತನ ಎಡಗಾಲು ಸೀಳಿದೆ.
ಪ್ರಕರಣವೊಂದರಲ್ಲಿ ಪರಾರಿಯಾಗಿದ್ದ ನಸ್ರುಲ್ಲಾನನ್ನು ಬಂಧಿಸಲು ತೆರಳಿದ್ದಾಗ ಘಟನೆ ಸಂಭವಿಸಿದೆ. ಇವತ್ತು ಬೆಳಗ್ಗೆ ನಸ್ರು ಇರುವ ಜಾಗಕ್ಕೆ ಪೊಲೀಸರು ತೆರಳಿದಾಗ ಆತ ದಾಳಿ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.
ಪಿಸ್ತೂಲು, ಡ್ರ್ಯಾಗರ್ನಿಂದ ದಾಳಿಗೆ ಯತ್ನ
ಓಲ್ಡ್ ಟೌನ್ ಠಾಣೆ ಪಿಎಸ್ಐ ಚಂದ್ರಶೇಖರ್ ಸೋಮವಾರ ದಾಳಿ ನಡೆಸಿ 1.4 ಕೆ.ಜಿ ಗಾಂಜಾ ಸಹಿತ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದರು. ನಸ್ರು ಅಲಿಯಾಸ್ ನಸ್ರುಲ್ಲಾ ಪರಾರಿಯಾಗಿದ್ದ. ಇವತ್ತು ಈತನ ಬಂಧನಕ್ಕೆ ತೆರಳಿದಾಗ ಕಂಟ್ರಿ ಪಿಸ್ತೂಲ್ ಮತ್ತು ಡ್ರ್ಯಾಗರ್ನಿಂದ ಪೊಲೀಸ್ ಸಿಬ್ಬಂದಿ ಮೇಲೆ ದಾಳಿಗೆ ಯತ್ನಿಸಿದ್ದಾನೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ವಾಟ್ಸಪ್ ಮೂಲಕ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ನಸ್ರುಲ್ಲಾ ವೆಲ್ಡಿಂಗ್ ಕೆಲಸ ಮಾಡುತ್ತಿದ್ದ. ಈತ ಭದ್ರಾವತಿಯ ಅನ್ವರ್ ಕಾಲೋನಿಯ ನಿವಾಸಿ. ಈತನ ವಿರುದ್ಧ ಐದು ಪ್ರಕರಣಗಳಿವೆ.
ನ್ಯೂ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ನಸ್ರು ಬಳಿ ಇದ್ದ ಕಂಟ್ರಿ ಪಿಸ್ತೂಲ್ ಮತ್ತು ಡ್ರ್ಯಾಗರ್ ವಶಕ್ಕೆ ಪಡೆಯಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲ ಅಬ್ಬರ ಮುಂದುವರಿಕೆ, ಇವತ್ತು ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200