ಶಿವಮೊಗ್ಗ: ಅಂತರ ರಾಜ್ಯ ಕಳ್ಳನೊಬ್ಬನ (Thief) ಕಾಲಿಗೆ ಶಿವಮೊಗ್ಗದ ಜಯನಗರ ಠಾಣೆ ಪೊಲೀಸರು ಗುಂಡು ಹಾರಿಸಿದ್ದಾರೆ. ಅಂತರ ರಾಜ್ಯ ಕಳ್ಳ ಮಂಜುನಾಥ್ ಅಲಿಯಾಸ್ ಕಲ್ಕೆರೆ ಮಂಜು ಎಂಬಾತನ ಕಾಲಿಗೆ ಇಂದು ಬೆಳಗ್ಗೆ ಗುಂಡು ಹಾರಿಸಲಾಗಿದೆ.
ಕಳೆದ ಮೂರ್ನಾಲ್ಕು ದಿನದಿಂದ ಕಲ್ಕೆರೆ ಮಂಜ ಶಿವಮೊಗ್ಗದಲ್ಲಿ ಓಡಾಡುತ್ತಿರುವ ಸುಳಿವು ಲಭಿಸಿತ್ತು. ಖಚಿತ ಮಾಹಿತಿ ಮೇರೆಗೆ ಇಂದು ಬೆಳಗ್ಗೆ ಪೊಲೀಸರು ಬಂಧಿಸಲು ತೆರಳಿದ್ದರು. ಈ ಸಂದರ್ಭ ಪೊಲೀಸ್ ಸಿಬ್ಬಂದಿ ದ್ಯಾಮಪ್ಪ ಅವರ ಮೇಲೆ ಮಂಜ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ.
ಆತ್ಮರಕ್ಷಣೆಗಾಗಿ ಜಯನಗರ ಪಿಎಸ್ಐ ನವೀನ್ ಬ್ಯಾಕೋಡು ಒಂದು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ್ದು, ಬಳಿಕ ಕಲ್ಕೆರೆ ಮಂಜನ ಕಾಲಿಗೆ ಗುಂಡು ಹೊಡೆದಿದ್ದಾರೆ. ಮಂಜನ ಎಡಗಾಲಿಗೆ ಗುಂಡು ತಗುಲಿದೆ.
ಗಾಯಾಳು ಪೊಲೀಸ್ ಸಿಬ್ಬಂದಿ ದ್ಯಾಮಪ್ಪ ಮತ್ತು ಕಲ್ಕೆರೆ ಮಂಜನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇದನ್ನೂ ಓದಿ » ಶಿವಮೊಗ್ಗದ ಉಪನೋಂದಣಾಧಕಾರಿ ಕಚೇರಿ ಸ್ಥಳಾಂತರ, ಇಲ್ಲಿದೆ ಹೊಸ ವಿಳಾಸ

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200