Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಶಿವಮೊಗ್ಗದಲ್ಲಿ ಪ್ರಾಪರ್ಟಿ ರಿಟರ್ನ್ ಪರೇಡ್, ವಾರಸುದಾರರಿಗೆ ಮರಳಿತು ಕೋಟಿ ಕೋಟಿಯ ವಸ್ತುಗಳು

ಶಿವಮೊಗ್ಗದಲ್ಲಿ ಪ್ರಾಪರ್ಟಿ ರಿಟರ್ನ್ ಪರೇಡ್, ವಾರಸುದಾರರಿಗೆ ಮರಳಿತು ಕೋಟಿ ಕೋಟಿಯ ವಸ್ತುಗಳು

16/12/2022 10:18 AM
ನಿತಿನ್‌ ಕೈದೊಟ್ಲು

SHIVAMOGGA LIVE NEWS | 16 DECEMBER 2022

ಶಿವಮೊಗ್ಗ : ಜಿಲ್ಲೆಯ ಪೊಲೀಸರು 283 ಕಳ್ಳತನ ಪ್ರಕರಣಗಳನ್ನು ಭೇದಿಸಿ 4.32 ಕೋಟಿ ರೂ. ಮೌಲ್ಯದ ವಸ್ತುಗಳನ್ನು ವಾರಸುದಾರರಿಗೆ ಹಿಂತಿರುಗಿಸಿದರು. ಕಳ್ಳತನವಾಗಿದ್ದ ವಸ್ತುಗಳನ್ನು ಡಿಎಆರ್ ಮೈದಾನದಲ್ಲಿ ಆಯೋಜಿಸಿದ್ದ ಪ್ರಾಪರ್ಟಿ ರಿಟರ್ನ್ ಪರೇಡ್ ನಲ್ಲಿ (property return parade) ವಾರುಸದಾರರಿಗೆ ಹಿಂದಿರುಗಿಸಲಾಯಿತು.

ಇವತ್ತಿನ ಎಲ್ಲ NEWS
» ಇವತ್ತಿನ ಎಲ್ಲ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

shivamogga live news whatsappa number

Shimoga nanjappa Hospital

(property return parade)

ಎಷ್ಟು ಪ್ರಕರಣಗಳು?

2022ರಲ್ಲಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ 633 ವಿವಿಧ ಕಳ್ಳತನ ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಪೊಲೀಸರು 238 ಪ್ರಕರಣಗಳನ್ನು ಪತ್ತೆ ಮಾಡಿದ್ದಾರೆ. ಅದರಲ್ಲಿ 1 ಲಾಭಕ್ಕಾಗಿ ಕೊಲೆ, 5 ದರೋಡೆ, 24 ಸುಲಿಗೆ, 56 ಕನ್ನ ಕಳ್ಳವು, 46 ಸಾಮಾನ್ಯ ಕಳವು, 4 ಜಾನುವಾರು ಕಳವು, 99 ವಾಹನ ಕಳವು, 5 ವಂಚನೆ ಪ್ರಕರಣಗಳಿವೆ.

3.80 ಕೋಟಿ ರೂ. ಮೌಲ್ಯದ ಚಿನ್ನಾಭರಣ, ಬೆಳ್ಳಿ ಆಭರಣ, ಮೊಬೈಲ್ ಫೋನ್, ವಾಹನಗಳು, ಜಾನುವಾರು, ನಗದು, ಎಲೆಕ್ಟ್ರಾನಿಕ್ ವಸ್ತುಗಳು, ಅಡಕೆ ಮತ್ತು ಇತರೆ ವಸ್ತುಗಳನ್ನು ವಾರಸುದಾರರಿಗೆ ಹಿಂದಿರುಗಿಸಿದ್ದಾರೆ.

p9

(property return parade)

ಹಿಂದಿನ ವರ್ಷಗಳ ಕೇಸ್ ಪತ್ತೆ

ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಹಿಂದಿನ ವರ್ಷದ ಕೇಸ್ ಗಳು ಕೂಡ ಪತ್ತೆಯಾಗಿವೆ. ಸಿಕ್ಕ ವಸ್ತುಗಳನ್ನು ವಾರಸುದಾರರಿಗೆ ಹಿಂದಿರುಗಿಸಲಾಗಿದೆ. 4 ಸುಲಿಗೆ, 12 ಕನ್ನ ಕಳವು, 9 ಸಾಮಾನ್ಯ ಕಳವು ಮತ್ತು 20 ವಾಹನ ಕಳವು ಸೇರಿ 45 ಪ್ರಕರಣಗಳು ಪತ್ತೆಯಾಗಿವೆ. 51.79 ಲಕ್ಷ ಮೌಲ್ಯದ ವಸ್ತುಗಳನ್ನು ಹಿಂದಿರುಗಿಸಲಾಗಿದೆ.

p8

2022 ಮತ್ತು ಹಿಂದಿನ ವರ್ಷಗಳ ಕೇಸುಗಳು ಸೇರಿ ಒಟ್ಟು 283 ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ. 4.32 ಕೋಟಿ ರೂ. ಮೌಲ್ಯದ ವಸ್ತುಗಳನ್ನು ವಾರಸುದಾರರಿಗೆ ಹಿಂದಿರುಗಿಸಲಾಗಿದೆ.

ಏನಂದರು ಜನ?

ಮುರಳೀಧರ್, ಬಸವನಗುಡಿ – ‘ಕುಟುಂಬದವರು ಗೋಕರ್ಣ ತೆರಳಿದ್ದಾಗ ಮನೆಯಲ್ಲಿ ಕಳ್ಳತನವಾಗಿತ್ತು. 3 ದಿನದಲ್ಲಿ ಜಯನಗರ ಠಾಣೆ ಪೊಲೀಸರು ಕಳ್ಳರನ್ನು ಪತ್ತೆ ಮಾಡಿದರು.’

p7

ದೇವೇಂದ್ರಪ್ಪ, ಅರ್ಚಕರು, ಶನೈಶ್ಚರ ದೇವಸ್ಥಾನ, ನಗರ –  ‘ಚಂದ್ರ ಗ್ರಹಣದ ಸಂದರ್ಭ ದೇವಸ್ಥಾನದ ವಸ್ತುಗಳನ್ನು ತೊಳೆಯಲು ಇಟ್ಟಿದ್ದೆವು. ಕಾರಿನಲ್ಲಿ ಬಂದ ವ್ಯಕ್ತಿಯೊಬ್ಬ ರಕ್ತೇಶ್ವರಿ, ಗಣಪತಿ ವಿಗ್ರಹಗಳನ್ನು ಹೊತ್ತುಕೊಂಡು ಪರಾರಿಯಾಗಿದ್ದ. ನಗರ ಠಾಣೆಗೆ ದೂರು ನೀಡಿದ್ದೆವು. ಪತ್ತೆ ಹಚ್ಚಿ, ದೇವಸ್ಥಾನದ ವಸ್ತುಗಳನ್ನು ಹಿಂತಿರುಗಿಸಿದ್ದಾರೆ.’

p6

ಎಲಿಜಬೆತ್ ಕ್ಯಾಸ್ತಲಿನೊ, ಕೊಡಗು ಜಿಲ್ಲೆ – ‘ಲಷ್ಕರ್ ಮೊಹಲ್ಲಾದಲ್ಲಿ  ತಂಗಿ ಮನೆಗೆ ಬಂದಿದ್ದೆ. ಸಮೀಪದ ಚರ್ಚ್ ಗೆ ಹೋಗಿ ಪ್ರಾರ್ಥನೆ ಸಲ್ಲಿಸಿ ಬರುವಾಗ ಕೊರಳಲ್ಲಿದ್ದ ಚೈನ್ ಕಳ್ಳತನವಾಯಿತು. ಪೊಲೀಸರಿಗೆ ದೂರು ಕೊಟ್ಟಿದ್ದೆವು. ಬೇಗ ಹುಡುಕಿಕೊಟ್ಟರು.’

p5

ಇಂದ್ರಾಣಿ, ವೃದ್ಧೆ – ‘ಹುಷಾರಿಲ್ಲ ಅಂತಾ ಮಗಳ ಮನೆಗೆ ಹೋಗಿದ್ದೆ. ನಮ್ಮ ಮನೆಯಲ್ಲಿದ್ದ ಒಡವೆಗಳು ಕಳ್ಳತನವಾಗಿದ್ದವು. ಪೊಲೀಸರು ಬೇಗ ಹುಡಿಕಿಕೊಟ್ಟರು.’

p4

ಜಿಲ್ಲಾ ರಕ್ಷಣಾಧಿಕಾರಿ ಏನಂದರು?

ಇದೇ ವೇಳೆ ಮಾತನಾಡಿದ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರು, ‘ಪ್ರತಿ ಪ್ರಕರಣ ಭೇದಿಸಲು ಸಾಕಷ್ಟು ಶ್ರಮ ಬೇಕು. ಜನರು ಮುಂಜಾಗ್ರತೆ ವಹಿಸಿದರೆ ಹಲವು ಪ್ರಕರಣಗಳನ್ನು ತಪ್ಪಿಸಬಹುದು. ಸಿಸಿ ಕ್ಯಾಮರಾ ಅಳವಡಿಸಿಕೊಳ್ಳಬೇಕು, ಅಲಾರಾಂಗಳನ್ನು ಬಳಸಬೇಕು. ಅನುಮಾನಾಸ್ಪದ ವ್ಯಕ್ತಿಗಳು, ವಾಹನಗಳು ಕಂಡಾಗ ಪೊಲೀಸರಿಗೆ ಮಾಹಿತಿ ನೀಡಬೇಕು. ಇದರಿಂದ ಶೇ.80ಷ್ಟು ಅಪರಾಧ ತಡೆಯಬಹುದಾಗಿದೆ’ ಎಂದರು.

ಇದನ್ನೂ ಓದಿ – ಮೈಸೂರಿನಿಂದ ಐರಾವತ ಬಸ್ಸಲ್ಲಿ ಬಂದ ಇಂಜಿನಿಯರ್, ಶಿವಮೊಗ್ಗದಲ್ಲಿ ಇಳಿಯುವಾಗ ಕಾದಿತ್ತು ಶಾಕ್

p3

ಹೆಚ್ಚುವರಿ ರಕ್ಷಣಾಧಿಕಾರಿ ವಿಕ್ರಂ ಆಮಟೆ, ಡಿವೈಎಸ್ ಪಿಗಳು, ವಿವಿಧ ಠಾಣೆ ಇನ್ಸ್ ಪೆಕ್ಟರ್ ಗಳು, ಸಬ್ ಇನ್ಸ್ ಪೆಕ್ಟರ್ ಗಳು, ಸಿಬ್ಬಂದಿ ಪಾಲ್ಗೊಂಡಿದ್ದರು.

p2

p1

Shimoga Nanjappa HOspital

p13

p14

Shimoga nanjappa HOspital

 

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article kuvempu-University- ಕುವೆಂಪು ವಿವಿ ಸ್ನಾತಕೋತ್ತರ ಪದವಿ ಕೌನ್ಸಿಲಿಂಗ್ ಡಿ.17ರ ಬದಲಿಗೆ ಡಿ.19ಕ್ಕೆ, ಮುಂದೂಡಲು ಕಾರಣವೇನು?
Next Article Shimoga-BJP-President-TD-Megharaj-Press-Meet ಬಿಜೆಪಿಯಿಂದ ಶಿವಮೊಗ್ಗದಲ್ಲಿ 24 ಪ್ರಕೋಷ್ಠ, 6 ಸಂಕುಲ, ರಾಜ್ಯ ಸಮಾವೇಶಕ್ಕೆ 750 ಪ್ರಕೋಷ್ಠ ಸದಸ್ಯರು

ಇದನ್ನೂ ಓದಿ

Lokayukta-raid-gold-found-at-Professors-house.
SHIVAMOGGA CITY

ಶಿವಮೊಗ್ಗ |ಪ್ರೊಫೆಸರ್‌ ಬಳಿ ಸಿಕ್ತು ಕೋಟಿ ಕೋಟಿಯ ಆಸ್ತಿ, ಲಕ್ಷ ಲಕ್ಷದ ಬ್ಯಾಂಕ್‌ ಬ್ಯಾಲೆನ್ಸ್‌, ದುಬಾರಿ ವಾಚುಗಳು, ರಾಶಿ ರಾಶಿ ಶೂಗಳು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
24/06/2025
Lokayukta-raid-at-Shimoga-hosanagara-and-shikaripura.
SHIVAMOGGA CITY

BREAKING NEWS – ಶಿವಮೊಗ್ಗ ಜಿಲ್ಲೆಯ ಮೂರು ಕಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
24/06/2025
BJP-City-president-Mohan-Reddy-press-meet.
SHIVAMOGGA CITY

ತುರ್ತು ಪರಿಸ್ಥಿತಿಗೆ 50 ವರ್ಷ, ಶಿವಮೊಗ್ಗದಲ್ಲಿ ಕರಾಳ ದಿನ, ಯಾವಾಗ? ಏನೆಲ್ಲ ಕಾರ್ಯಕ್ರಮ ಇರುತ್ತೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
23/06/2025
power cut mescom ELECTRICITY
SHIVAMOGGA CITY

ಶಿವಮೊಗ್ಗ ಸಿಟಿಯ ಅರ್ಧಕ್ಕರ್ಧ ಭಾಗದಲ್ಲಿ ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
23/06/2025
Traffic-Police-checks-School-vans-in-Shimoga-city
SHIVAMOGGA CITY

ಶಿವಮೊಗ್ಗ ಸಿಟಿಯಲ್ಲಿ ಶಾಲಾ ವಾಹನಗಳ ದಿಢೀರ್‌ ತಪಾಸಣೆ, ನಾಲ್ಕು ಡ್ರಂಕ್‌ ಅಂಡ್‌ ಡ್ರೈವ್‌ ಕೇಸ್‌ ಪತ್ತೆ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
23/06/2025
Former-Minister-MP-Renukacharya-at-Shimoga-DAR-Police-ground
SHIVAMOGGA CITY

ಶಿವಮೊಗ್ಗದಲ್ಲಿ ದಾವಣಗೆರೆ ಸಿಟಿ ಬಂದ್‌ಗೆ ದಿನಾಂಕ ಘೋಷಿಸಿದ ಮಾಜಿ ಸಚಿವ ರೇಣುಕಾಚಾರ್ಯಾ, ಯಾವಾಗ? ಯಾಕೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
23/06/2025
Previous Next

ಶಿವಮೊಗ್ಗ ಲೈವ್ ಗ್ರೂಪ್ ಸೇರಲು ಕ್ಲಿಕ್ ಮಾಡಿ

🟢 shivamoggalive.com

whatsapp-logo
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?