SHIVAMOGGA LIVE NEWS | 20 DECEMBER 2024
ಶಿವಮೊಗ್ಗ : ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿಯಲ್ಲಿ ಶಿಕ್ಷಕಿಯೊಬ್ಬರ ವ್ಯಾನಿಟಿ ಬ್ಯಾಗ್ನಿಂದ ಪರ್ಸ್ (Purse) ಕಳ್ಳತನ ಮಾಡಲಾಗಿದೆ. ಅದರಲ್ಲಿದ್ದ ಎಟಿಎಂ ಕಾರ್ಡ್ ಬಳಿಸಿ ಹಣ ಡ್ರಾ ಮಾಡಿಕೊಳ್ಳಲಾಗಿದೆ.
ಶಿಕ್ಷಕಿ ಅನ್ಸುತಾ ಸೀಕ್ವೇರಾ ಎಂಬುವವರು ಕರ್ತವ್ಯದ ಮೇರೆಗೆ ಡಿಡಿಪಿಐ ಕಚೇರಿಗೆ ಆಗಮಿಸಿದ್ದರು. ಕೊಠಡಿಯಲ್ಲಿ ತಮ್ಮ ವ್ಯಾನಿಟಿ ಬ್ಯಾಗ್ ಇಟ್ಟು, ಸಭೆಗೆ ತೆರಳಿದ್ದರು. ಸಭೆ ಮುಗಿಸಿ ಹಿಂತಿರುಗಿದಾಗ ವ್ಯಾನಿಟಿ ಬ್ಯಾಗ್ನ ಜಿಪ್ ತೆಗೆದಿತ್ತು. ಪರಿಶೀಲಿಸಿದಾಗ ಪರ್ಸ್ ನಾಪತ್ತೆಯಾಗಿತ್ತು. ಅದರಲ್ಲಿ ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಎಟಿಎಂ ಕಾರ್ಡುಗಳು ಇದ್ದವು.
ಇದನ್ನೂ ಓದಿ » ಸಕ್ರೆಬೈಲು ಬಳಿ ಧಗಧಗ ಹೊತ್ತಿ ಉರಿದ ಖಾಸಗಿ ಬಸ್, ತಪ್ಪಿದ ದೊಡ್ಡ ಅನಾಹುತ
ಅದೇ ದಿನ ಸಂಜೆ ಶಿಕ್ಷಕಿ ಅನ್ಸುತಾ ಸೀಕ್ವೇರಾ ಅವರ ಮೊಬೈಲ್ಗೆ ಹಣ ಡ್ರಾ ಆಗಿರುವ ಮೆಸೇಜ್ ಬಂದಿತ್ತು. ಕಳ್ಳತನ ಮಾಡಿದ್ದ ಎಟಿಎಂ ಕಾರ್ಡ್ ಬಳಸಿ ಒಟ್ಟು 36 ಸಾವಿರ ರೂ. ಹಣ ಡ್ರಾ ಮಾಡಲಾಗಿತ್ತು. ಘಟನೆ ಸಂಬಂಧ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗದಲ್ಲಿ ಅತಿ ದೊಡ್ಡ ಕಾರ್ ಎಕ್ಸ್ಚೇಂಜ್ ಮೇಳ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200