ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 20 DECEMBER 2024
ಶಿವಮೊಗ್ಗ : ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿಯಲ್ಲಿ ಶಿಕ್ಷಕಿಯೊಬ್ಬರ ವ್ಯಾನಿಟಿ ಬ್ಯಾಗ್ನಿಂದ ಪರ್ಸ್ (Purse) ಕಳ್ಳತನ ಮಾಡಲಾಗಿದೆ. ಅದರಲ್ಲಿದ್ದ ಎಟಿಎಂ ಕಾರ್ಡ್ ಬಳಿಸಿ ಹಣ ಡ್ರಾ ಮಾಡಿಕೊಳ್ಳಲಾಗಿದೆ.
ಶಿಕ್ಷಕಿ ಅನ್ಸುತಾ ಸೀಕ್ವೇರಾ ಎಂಬುವವರು ಕರ್ತವ್ಯದ ಮೇರೆಗೆ ಡಿಡಿಪಿಐ ಕಚೇರಿಗೆ ಆಗಮಿಸಿದ್ದರು. ಕೊಠಡಿಯಲ್ಲಿ ತಮ್ಮ ವ್ಯಾನಿಟಿ ಬ್ಯಾಗ್ ಇಟ್ಟು, ಸಭೆಗೆ ತೆರಳಿದ್ದರು. ಸಭೆ ಮುಗಿಸಿ ಹಿಂತಿರುಗಿದಾಗ ವ್ಯಾನಿಟಿ ಬ್ಯಾಗ್ನ ಜಿಪ್ ತೆಗೆದಿತ್ತು. ಪರಿಶೀಲಿಸಿದಾಗ ಪರ್ಸ್ ನಾಪತ್ತೆಯಾಗಿತ್ತು. ಅದರಲ್ಲಿ ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಎಟಿಎಂ ಕಾರ್ಡುಗಳು ಇದ್ದವು.

ಇದನ್ನೂ ಓದಿ » ಸಕ್ರೆಬೈಲು ಬಳಿ ಧಗಧಗ ಹೊತ್ತಿ ಉರಿದ ಖಾಸಗಿ ಬಸ್, ತಪ್ಪಿದ ದೊಡ್ಡ ಅನಾಹುತ
ಅದೇ ದಿನ ಸಂಜೆ ಶಿಕ್ಷಕಿ ಅನ್ಸುತಾ ಸೀಕ್ವೇರಾ ಅವರ ಮೊಬೈಲ್ಗೆ ಹಣ ಡ್ರಾ ಆಗಿರುವ ಮೆಸೇಜ್ ಬಂದಿತ್ತು. ಕಳ್ಳತನ ಮಾಡಿದ್ದ ಎಟಿಎಂ ಕಾರ್ಡ್ ಬಳಸಿ ಒಟ್ಟು 36 ಸಾವಿರ ರೂ. ಹಣ ಡ್ರಾ ಮಾಡಲಾಗಿತ್ತು. ಘಟನೆ ಸಂಬಂಧ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗದಲ್ಲಿ ಅತಿ ದೊಡ್ಡ ಕಾರ್ ಎಕ್ಸ್ಚೇಂಜ್ ಮೇಳ
_page-0001.jpg)
LATEST NEWS
- ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 18 ಮಾರ್ಚ್ 2026 – ಅಡಿಕೆ ಧಾರಣೆ

- ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

About The Editor
ನಿತಿನ್ ಆರ್.ಕೈದೊಟ್ಲು















