SHIVAMOGGA LIVE NEWS | 20 DECEMBER 2024
ಶಿವಮೊಗ್ಗ : ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿಯಲ್ಲಿ ಶಿಕ್ಷಕಿಯೊಬ್ಬರ ವ್ಯಾನಿಟಿ ಬ್ಯಾಗ್ನಿಂದ ಪರ್ಸ್ (Purse) ಕಳ್ಳತನ ಮಾಡಲಾಗಿದೆ. ಅದರಲ್ಲಿದ್ದ ಎಟಿಎಂ ಕಾರ್ಡ್ ಬಳಿಸಿ ಹಣ ಡ್ರಾ ಮಾಡಿಕೊಳ್ಳಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಶಿಕ್ಷಕಿ ಅನ್ಸುತಾ ಸೀಕ್ವೇರಾ ಎಂಬುವವರು ಕರ್ತವ್ಯದ ಮೇರೆಗೆ ಡಿಡಿಪಿಐ ಕಚೇರಿಗೆ ಆಗಮಿಸಿದ್ದರು. ಕೊಠಡಿಯಲ್ಲಿ ತಮ್ಮ ವ್ಯಾನಿಟಿ ಬ್ಯಾಗ್ ಇಟ್ಟು, ಸಭೆಗೆ ತೆರಳಿದ್ದರು. ಸಭೆ ಮುಗಿಸಿ ಹಿಂತಿರುಗಿದಾಗ ವ್ಯಾನಿಟಿ ಬ್ಯಾಗ್ನ ಜಿಪ್ ತೆಗೆದಿತ್ತು. ಪರಿಶೀಲಿಸಿದಾಗ ಪರ್ಸ್ ನಾಪತ್ತೆಯಾಗಿತ್ತು. ಅದರಲ್ಲಿ ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಎಟಿಎಂ ಕಾರ್ಡುಗಳು ಇದ್ದವು.
ಇದನ್ನೂ ಓದಿ » ಸಕ್ರೆಬೈಲು ಬಳಿ ಧಗಧಗ ಹೊತ್ತಿ ಉರಿದ ಖಾಸಗಿ ಬಸ್, ತಪ್ಪಿದ ದೊಡ್ಡ ಅನಾಹುತ
ಅದೇ ದಿನ ಸಂಜೆ ಶಿಕ್ಷಕಿ ಅನ್ಸುತಾ ಸೀಕ್ವೇರಾ ಅವರ ಮೊಬೈಲ್ಗೆ ಹಣ ಡ್ರಾ ಆಗಿರುವ ಮೆಸೇಜ್ ಬಂದಿತ್ತು. ಕಳ್ಳತನ ಮಾಡಿದ್ದ ಎಟಿಎಂ ಕಾರ್ಡ್ ಬಳಸಿ ಒಟ್ಟು 36 ಸಾವಿರ ರೂ. ಹಣ ಡ್ರಾ ಮಾಡಲಾಗಿತ್ತು. ಘಟನೆ ಸಂಬಂಧ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.