ಸಿಟಿ ಬಸ್ಸಲ್ಲಿ ಪರ್ಸ್ ಕಳೆದುಕೊಂಡ ಮಹಿಳೆಗೆ ಕೆಲವೆ ಹೊತ್ತಲ್ಲಿ ಮತ್ತೊಂದು ಶಾಕ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗದ ಲೈವ್.ಕಾಂ | SHIMOGA CRIME NEWS | 7 ಫೆಬ್ರವರಿ 2022

ಶಿವಮೊಗ್ಗದ ಸಿಟಿ ಬಸ್ ಒಂದರಲ್ಲಿ ಮಹಿಳೆಯ ಪರ್ಸ್ ಕಳವು ಮಾಡಲಾಗಿದೆ. ಅದರಲ್ಲಿದ್ದ ಎಟಿಎಂ ಕಾರ್ಡ್ ಬಳಸಿ ಹಣವನ್ನು ಡ್ರಾ ಮಾಡಲಾಗಿದ್ದು, ಮಹಿಳೆ ಸಂಕಷ್ಟಕ್ಕೆ ಸಿಲುಕಿದ್ದಾರೆ.

Nanjappa Hospital Corona Care

ಶ್ರೀರಾಮ ನಗರದ ಕಾಮಾಕ್ಷಮ್ಮ ಎಂಬುವವರ ಪರ್ಸ್ ಕಳ್ಳತನವಾಗಿದೆ. ಪರ್ಸ್’ನಲ್ಲಿದ್ದ ಮೂರು ಎಟಿಎಂ ಕಾರ್ಡ್ ಬಳಸಿ ಹಣ ಡ್ರಾ ಮಾಡಲಾಗಿದೆ.

ಹೇಗಾಯ್ತು ಪರ್ಸ್ ಕಳ್ಳತನ?

ಕಾಮಾಕ್ಷಮ್ಮ ಅವರು ಖಾಸಗಿ ಸಂಸ್ಥೆಯೊಂದರಲ್ಲಿ ಅಟೆಂಡರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕಳೆದ ಮಂಗಳವಾರ ಕೆಲಸ ಮುಗಿಸಿ ಮನೆಗೆ ಬರುವಾಗ ಮಿಳಘಟ್ಟ ಸಂತೆಗೆ ಹೋಗಿದ್ದರು. ಸಂತೆ ಮುಗಿಸಿ ಸಿಟಿ ಬಸ್ ಹತ್ತಿ ಅಣ್ಣಾನಗರಕ್ಕೆ ಬಂದು ಇಳಿದಿದ್ದಾರೆ. ಆಗ ಕಾಮಾಕ್ಷಮ್ಮ ಅವರ ಪರ್ಸ್ ನಾಪತ್ತೆಯಾಗಿತ್ತು.

ಶಿವಮೊಗ್ಗ, ಭದ್ರಾವತಿಯಲ್ಲಿ ಹಣ ಡ್ರಾ

ಕಾಮಾಕ್ಷಮ್ಮ ಅವರ ಪರ್ಸ್’ನಲ್ಲಿ ಅವರಿಗೆ ಸೇರಿದ ವಿವಿಧ ಬ್ಯಾಂಕುಗಳ ಮೂರು ಎಟಿಎಂ ಕಾರ್ಡುಗಳಿದ್ದವು. ಪರ್ಸ್ ಕದ್ದವರು ಅದೇ ದಿನ ಶಿವಮೊಗ್ಗ ಮತ್ತು ಭದ್ರಾವತಿಯಲ್ಲಿ ಎಟಿಎಂ ಕಾರ್ಡ್ ಬಳಸಿ ಹಣ ಡ್ರಾ ಮಾಡಿದ್ದಾರೆ. 51,200 ರೂ. ಡ್ರಾ ಮಾಡಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಕಾಮಾಕ್ಷಮ್ಮ ಅವರು ಎಟಿಎಂ ಕಾರ್ಡ್ ಜೊತೆಗೆ ಅವುಗಳ ಪಾಸ್ ವರ್ಡ್ ಬರೆದು ಇಟ್ಟುಕೊಂಡಿದ್ದರು. ಇದು ಕಳ್ಳರಿಗೆ ಅನುಕೂಲವಾಗಿದೆ.

ಪರ್ಸ್ ಕಳೆದುಕೊಂಡಿದ್ದು ಮತ್ತು ಬ್ಯಾಂಕ್ ಖಾತೆಯಲ್ಲಿ ಹಣ ಡ್ರಾ ಮಾಡಲಾಗಿರುವ ಕುರಿತು ಕುಟುಂಬದವರೊಂದಿಗೆ ಚರ್ಚೆ ಮಾಡಿದ ಕಾಮಾಕ್ಷಮ್ಮ, ಬಳಿಕ ದೂರು ನೀಡಿದ್ದಾರೆ. ಪರ್ಸ್’ನಲ್ಲಿದ್ದ ಮೂರು ಎಟಿಎಂ ಕಾರ್ಡ್, ಪ್ಯಾನ್ ಕಾರ್ಡ್, ಐಡಿ ಕಾರ್ಡ್, ಪರ್ಸ್’ನಲ್ಲಿದ್ದ 300 ರೂ. ಕಳ್ಳತನವಾಗಿದೆ. ಅಲ್ಲದೆ ಎಟಿಎಂ ಕಾರ್ಡ್ ಬಳಸಿ 51,200 ರೂ. ಹಣ ಡ್ರಾ ಮಾಡಲಾಗಿದೆ.

ಕಳ್ಳನನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳುವಂತೆ ಕಾಮಾಕ್ಷಮ್ಮ ಅವರು ದೊಡ್ಡಪೇಟೆ ಠಾಣೆಯಲ್ಲಿ ದೂರು ನೀಡಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

shimoga live news reach to countries

About Shivamogga LiveShimoga District Profile

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 7, 2022

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment