ಸೋಗಾನೆ ಬಳಿ ಅಧಿಕಾರಿಗಳ ದಾಳಿ, ಲೋಡ್‌ ಆಗಿದ್ದ ಟ್ರಾಕ್ಟರ್‌ ಬಿಟ್ಟು ಎಲ್ಲರು ಪರಾರಿ

Published On : ಏಪ್ರಿಲ್ 23, 2026

Published By : ನಿತಿನ್‌ ಆರ್‌.ಕೈದೊಟ್ಲು 

ಶಿವಮೊಗ್ಗ: ಆಹಾರ ಪಾರ್ಕ್ (Food Park) ನಿರ್ಮಾಣಕ್ಕಾಗಿ ಮೀಸಲಿಟ್ಟಿರುವ ಸರ್ಕಾರಿ ಜಮೀನಿನಲ್ಲಿ ಮಣ್ಣು ಕದಿಯುತ್ತಿದ್ದವರ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಸೋಗಾನೆ ಗ್ರಾಮದಲ್ಲಿ ಆಹಾರ ಪಾರ್ಕ್‌ ನಿರ್ಮಾಣಕ್ಕೆ ಆಹಾರ ಕರ್ನಾಟಕ ನಿಯಮಿತಕ್ಕೆ ಸೇರಿದ ಸರ್ವೆ ಸಂಖ್ಯೆ 120 ರ ಸುಮಾರು 97 ಎಕರೆ ಜಮೀನು ಮೀಸಲಿಡಲಾಗಿದೆ. ಈ ಜಾಗದಲ್ಲಿ ಅಕ್ರಮವಾಗಿ ಮಣ್ಣು ತಗೆಯಲಾಗುತ್ತಿತ್ತು.

ಇದನ್ನೂ ಓದಿ : ಶಿವಮೊಗ್ಗದ ಗೋಪಿ ಸರ್ಕಲ್‌ನಲ್ಲಿ ಮಲ್ಲಿಕಾರ್ಜುನ ಖರ್ಗೆ ಪ್ರತಿಕೃತಿ ದಹನ

ಅಧಿಕಾರಿಗಳ ದಿಢೀರ್‌ ದಾಳಿ

ಖಚಿತ ಮಾಹಿತಿ ಮೇರೆಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ದಿಢೀರ್‌ ದಾಳಿ ನಡೆಸಿದರು. ಈ ವೇಳೆ ಸ್ಥಳದಲ್ಲಿ ಮಣ್ಣು ತುಂಬಿದ್ದ ಒಂದು ಜೆಸಿಬಿ, ಎರಡು ಟಿಪ್ಪರ್ ಲಾರಿ ಮತ್ತು ಎರಡು ಟ್ರಾಕ್ಟರ್‌ಗಳು ಕಂಡುಬಂದಿವೆ. ಅಧಿಕಾರಿಗಳ ವಾಹನವನ್ನು ದೂರದಿಂದಲೇ ಗಮನಿಸಿದ ಚಾಲಕರು ವಾಹನಗಳನ್ನು ಬಿಟ್ಟು ಓಡಿ ಹೋಗಿದ್ದಾರೆ ಎಂದು ಆರೋಪಿಸಲಾಗಿದೆ.

Tunga-Nagara-Police-Station-Shimoga

ಲೋಡ್‌ ಮಾಡಿದ್ದ ಟ್ರಾಕ್ಟರ್‌ ವಶಕ್ಕೆ

ದಾಳಿ ಸಂದರ್ಭ ಮಣ್ಣು ತುಂಬಿದ್ದ ಒಂದು ಟ್ರಾಕ್ಟರ್ ಅನ್ನು ಅಧಿಕಾರಿಗಳು ವಶಪಡಿಸಿಕೊಂಡು ಪೊಲೀಸರಿಗೆ ಒಪ್ಪಿಸಿದ್ದಾರೆ. ಅಂದಾಜು 25 ಲೋಡ್ ಮಣ್ಣನ್ನು ಅಕ್ರಮವಾಗಿ ಕಳವು ಮಾಡಲಾಗಿದೆ. ಇದರ ಮೌಲ್ಯ ₹43,750 ಎಂದು ಅಂದಾಜಿಸಲಾಗಿದೆ.

ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಭೂ ವಿಜ್ಞಾನಿ ನೀಡಿದ ದೂರಿನ ಮೇರೆಗೆ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ 

ನಮ್ಮ ಸೋಶಿಯಲ್ ಮೀಡಿಯಾ ಗ್ರೂಪ್ ಸೇರಿ

JNN College of Engineering Admissions started

© ಶಿವಮೊಗ್ಗ ಲೈವ್‌ : ಏಪ್ರಿಲ್ 23, 2026

Leave a Comment