ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ಸೆಪ್ಟೆಂಬರ್ 2021
ಕಾರಿನಲ್ಲಿ ಗಾಂಜಾ ತಂದು ಮಾರಾಟ ಮಾಡುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಇವರಿಂದ ಭಾರಿ ಮೊತ್ತದ ಗಾಂಜಾ ವಶಕ್ಕೆ ಪಡೆಯಲಾಗಿದೆ. ಘಟನೆಯಲ್ಲಿ ಮೂವರು ಅರೆಸ್ಟ್ ಆಗಿದ್ದು, ನಾಲ್ವರು ನಾಪತ್ತೆಯಾಗಿದ್ದಾರೆ.
ಶಿವಮೊಗ್ಗದ ಕಲ್ಲೂರು ಗ್ರಾಮದ ಚಾನಲ್ ಬಳಿ ಘಟನೆ ಸಂಭವಿಸಿದೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ತುಂಗಾ ನಗರ ಠಾಣೆ ಗಾಂಜಾ ಮಾರಾಟಗಾರರನ್ನು ಬಂಧಿಸಿದ್ದಾರೆ.
ಪ್ರತಿದಿನ ನಡೆಯುತಿತ್ತು ಗಾಂಜಾ ಮಾರಾಟ
ಕಲ್ಲೂರು ಗ್ರಾಮದ ಚಾನಲ್ ಬಳಿ ಗಾಂಜಾ ಮಾರಾಟಗಾರರು ಪ್ರತಿದಿನ ಬರುತ್ತಿದ್ದರು. ಕಾರಿನಲ್ಲಿ ಗಾಂಜಾ ತಂದು ಮಾರಾಟ ಮಾಡುತ್ತಿದ್ದರು. ಈ ಬಗ್ಗೆ ಜನರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಇದೆ ಆಧಾರದ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.

ಪೇಂಟರ್, ಪ್ಲಂಬರ್ ಮತ್ತು ಎಸ್ಕೇಪ್ ಆದವರು
ಕಾರಿನಲ್ಲಿ ಗಾಂಜಾ ತಂದು ಮಾರಾಟ ಮಾಡುತ್ತಿದ್ದವರು ಊರುಗಡೂರು, ಸೂಳೆಬೈಲಿನವರು ಎಂದು ತಿಳಿದು ಬಂದಿದೆ. ಪ್ಲಂಬರ್ ಕೆಲಸ ಮಾಡುತ್ತಿದ್ದ ಶೇಖ್ ಅಹಮದ್, ಮೊಹಮದ್ ಮುಸ್ತಫಾ, ಪೇಂಟರ್ ಅಲ್ಲಾಭಕ್ಷಿ ಬಂಧಿತರು. ಪೊಲೀಸರು ದಾಳಿ ನಡೆಸುತ್ತಿದ್ದಂತೆ ರಾಹಿಲ್, ಕುರಂ, ತಾಸೀರ್, ಮಾಡ್ಲರ್ ಶಾರೂ ಎಸ್ಕೇಪ್ ಆಗಿದ್ದಾರೆ. ಇವರ ಪತ್ತೆಗೆ ಕಾರ್ಯಕ್ಕೆ ಪೊಲೀಸರು ಜಾಲ ಬೀಸಿದ್ದಾರೆ.
ಕೆಜಿಗಟ್ಟಲೆ ಗಾಂಜಾ, ಕಾರು ಸೀಜ್
ಬಂಧಿತರಿಂದ ಪೊಲೀಸರು ಎರಡು ಕೆಜಿ 120 ಗ್ರಾಂ ಗಾಂಜಾ ವಶಕ್ಕೆ ಪಡೆದಿದ್ದಾರೆ. ಇದರ ಮೌಲ್ಯದ ಸುಮಾರು 80 ಸಾವಿರ ರೂ. ಎಂದು ಅಂದಾಜಿಸಲಾಗಿದೆ. ಘಟನೆಗೆ ಬಳಕೆ ಮಾಡಿಕೊಂಡಿದ್ದ ಕಾರನ್ನು ವಶಕ್ಕೆ ಪಡೆಯಲಾಗಿದೆ.
ಡಿವೈಎಸ್ಪಿ ಪ್ರಶಾಂತ್ ಮುನ್ನೋಳಿ ಮಾರ್ಗದರ್ಶನದಲ್ಲಿ, ಇನ್ಸ್ ಪೆಕ್ಟರ್ ದೀಪಕ್, ಸಿಬ್ಬಂದಿಗಳಾದ ಅರುಣ್ ಕುಮಾರ್, ಸಂದೀಪ್, ಕಾಂತರಾಜು, ರಾಜೇಗೌಡ ಪಾಟೀಲ್ ಅವರು ದಾಳಿಯಲ್ಲಿ ಭಾಗವಹಿಸಿದ್ದರು.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
LATEST NEWS
- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

- ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

About The Editor
ನಿತಿನ್ ಆರ್.ಕೈದೊಟ್ಲು
















