ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ಸೆಪ್ಟೆಂಬರ್ 2021
ಕಾರಿನಲ್ಲಿ ಗಾಂಜಾ ತಂದು ಮಾರಾಟ ಮಾಡುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಇವರಿಂದ ಭಾರಿ ಮೊತ್ತದ ಗಾಂಜಾ ವಶಕ್ಕೆ ಪಡೆಯಲಾಗಿದೆ. ಘಟನೆಯಲ್ಲಿ ಮೂವರು ಅರೆಸ್ಟ್ ಆಗಿದ್ದು, ನಾಲ್ವರು ನಾಪತ್ತೆಯಾಗಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಶಿವಮೊಗ್ಗದ ಕಲ್ಲೂರು ಗ್ರಾಮದ ಚಾನಲ್ ಬಳಿ ಘಟನೆ ಸಂಭವಿಸಿದೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ತುಂಗಾ ನಗರ ಠಾಣೆ ಗಾಂಜಾ ಮಾರಾಟಗಾರರನ್ನು ಬಂಧಿಸಿದ್ದಾರೆ.
ಪ್ರತಿದಿನ ನಡೆಯುತಿತ್ತು ಗಾಂಜಾ ಮಾರಾಟ
ಕಲ್ಲೂರು ಗ್ರಾಮದ ಚಾನಲ್ ಬಳಿ ಗಾಂಜಾ ಮಾರಾಟಗಾರರು ಪ್ರತಿದಿನ ಬರುತ್ತಿದ್ದರು. ಕಾರಿನಲ್ಲಿ ಗಾಂಜಾ ತಂದು ಮಾರಾಟ ಮಾಡುತ್ತಿದ್ದರು. ಈ ಬಗ್ಗೆ ಜನರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಇದೆ ಆಧಾರದ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.
ಪೇಂಟರ್, ಪ್ಲಂಬರ್ ಮತ್ತು ಎಸ್ಕೇಪ್ ಆದವರು
ಕಾರಿನಲ್ಲಿ ಗಾಂಜಾ ತಂದು ಮಾರಾಟ ಮಾಡುತ್ತಿದ್ದವರು ಊರುಗಡೂರು, ಸೂಳೆಬೈಲಿನವರು ಎಂದು ತಿಳಿದು ಬಂದಿದೆ. ಪ್ಲಂಬರ್ ಕೆಲಸ ಮಾಡುತ್ತಿದ್ದ ಶೇಖ್ ಅಹಮದ್, ಮೊಹಮದ್ ಮುಸ್ತಫಾ, ಪೇಂಟರ್ ಅಲ್ಲಾಭಕ್ಷಿ ಬಂಧಿತರು. ಪೊಲೀಸರು ದಾಳಿ ನಡೆಸುತ್ತಿದ್ದಂತೆ ರಾಹಿಲ್, ಕುರಂ, ತಾಸೀರ್, ಮಾಡ್ಲರ್ ಶಾರೂ ಎಸ್ಕೇಪ್ ಆಗಿದ್ದಾರೆ. ಇವರ ಪತ್ತೆಗೆ ಕಾರ್ಯಕ್ಕೆ ಪೊಲೀಸರು ಜಾಲ ಬೀಸಿದ್ದಾರೆ.
ಕೆಜಿಗಟ್ಟಲೆ ಗಾಂಜಾ, ಕಾರು ಸೀಜ್
ಬಂಧಿತರಿಂದ ಪೊಲೀಸರು ಎರಡು ಕೆಜಿ 120 ಗ್ರಾಂ ಗಾಂಜಾ ವಶಕ್ಕೆ ಪಡೆದಿದ್ದಾರೆ. ಇದರ ಮೌಲ್ಯದ ಸುಮಾರು 80 ಸಾವಿರ ರೂ. ಎಂದು ಅಂದಾಜಿಸಲಾಗಿದೆ. ಘಟನೆಗೆ ಬಳಕೆ ಮಾಡಿಕೊಂಡಿದ್ದ ಕಾರನ್ನು ವಶಕ್ಕೆ ಪಡೆಯಲಾಗಿದೆ.
ಡಿವೈಎಸ್ಪಿ ಪ್ರಶಾಂತ್ ಮುನ್ನೋಳಿ ಮಾರ್ಗದರ್ಶನದಲ್ಲಿ, ಇನ್ಸ್ ಪೆಕ್ಟರ್ ದೀಪಕ್, ಸಿಬ್ಬಂದಿಗಳಾದ ಅರುಣ್ ಕುಮಾರ್, ಸಂದೀಪ್, ಕಾಂತರಾಜು, ರಾಜೇಗೌಡ ಪಾಟೀಲ್ ಅವರು ದಾಳಿಯಲ್ಲಿ ಭಾಗವಹಿಸಿದ್ದರು.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200