ಶಿವಮೊಗ್ಗದ ಲೈವ್.ಕಾಂ | SHIMOGA NEWS | 25 ಜನವರಿ 2022
ಅಧಿಕಾರಿಗಳಿಗೆ ಬೆದರಿಕೆ ಒಡ್ಡಿದ ಆರೋಪ ಸಂಬಂಧ ಮಾಸ ಪತ್ರಿಕೆಯೊಂದರ ವರದಿಗಾರರೊಬ್ಬರನ್ನು ಶಿವಮೊಗ್ಗದ ಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅವರ ವಿರುದ್ಧ ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಯೊಬ್ಬರು ದೂರು ನೀಡಿದ್ದರು.
ಇದನ್ನೂ ಓದಿ:
ವಿಶೇಷ ವಿಮಾನದಲ್ಲಿ ಶಿವಮೊಗ್ಗಕ್ಕೆ ಆಗಮಿಸಿದ ಅಮಿತ್ ಷಾ
ಆರ್.ಟಿ.ಐ ಕಾರ್ಯಕರ್ತ, ಮಾಸ ಪತ್ರಿಕೆಯೊಂದರ ವರದಿಗಾರ ಪಿ.ಸಿ.ಜಯಣ್ಣನವರ್ ಬಂಧಿತರು. ಜಯಣ್ಣನವರ್ ಅವರು ನಿತ್ಯ ಕಚೇರಿಗೆ ಬಂದು ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸುತ್ತಿದ್ದಾರೆ. ನೌಕರರಿಗೆ ಅವಹೇಳನಕಾರಿಯಾಗಿ ಮಾತನಾಡಿ, ಬೆದರಿಕೆ ಒಡ್ಡುತ್ತಿದ್ದಾರೆ. ಸಾಮಾಜಿಕ ಜಾಲತಾಣ ಮತ್ತು ಮಾಸ ಪತ್ರಿಕೆಯಲ್ಲಿ ವರದಿ ಪ್ರಕಟಿಸುತ್ತಿದ್ದಾರೆ ಎಂದು ದೂರು ನೀಡಲಾಗಿತ್ತು.
ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪಿ.ಸಿ.ಜಯಣ್ಣನವರ್ ಅವರನ್ನು ಬಂಧಿಸಲಾಗಿದೆ.



