ಗಾಂಧಿ ಬಜಾರ್ ಚಿನ್ನದ ವ್ಯಾಪಾರಿಗೆ ರಿವಲ್ವಾರ್ ತೋರಿಸಿ ಹಣ ದೋಚಿದ ಖದೀಮರು

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 18 ಜುಲೈ 2019

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಶಿವಮೊಗ್ಗದ ಚಿನ್ನ, ಬೆಳ್ಳಿ ವ್ಯಾಪಾರಿ ಮೇಲೆ ಹಲ್ಲೆ ನಡಸಿ, ರಿವಲ್ವಾರ್ ತೋರಿಸಿ ಹಣ ದೋಚಲಾಗಿದೆ. ಮತ್ತಷ್ಟು ಹಣಕ್ಕೆ ಬೇಡಿಕೆ ಇಡಲಾಗಿದೆ. ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.

ಗಂಧರ್ವ ನಗರ ನಿವಾಸಿ ಎಂ.ಕೆ.ಅನೀಸುರ್ ಇಸ್ಲಾಂ ಅವರ ಮೇಲೆ ಹಲ್ಲೆ ನಡೆಸಿ, ರಿವಾಲ್ವರ್ ತೋರಿಸಿ, ಹಣ ದೋಚಲಾಗಿದೆ. ಸಾದಿಕ್ ಅಲಿಯಾಸ್ ಸಾತು ಎಂಬಾತ ಕೃತ್ಯ ಎಸಗಿದವನು. ಗಾಂಧಿ ಬಜಾರ್’ನಲ್ಲಿರುವ ಅನೀಸುರ್ ಇಸ್ಲಾಂ ಅವರ ಚಿನ್ನ, ಬೆಳ್ಳಿ ಅಂಗಡಿಗೆ ಸಾದಿಕ್ ಪದೇ ಪದೇ ಬರುತ್ತಿದ್ದ. ಕೊಲೆ ಮಾಡುವ ಬೆದರಿಕೆ ಹಾಕಿ ಹಣ ಪಡೆಯುತ್ತಿದ್ದ.

ಬುಧವಾರ ಬೆಳಗ್ಗೆ ಅತೀಕ್ ಎಂಬಾತ ಅನೀಸುರ್ ಇಸ್ಲಾಂ ಅಂಗಡಿಗೆ ಬಂದು, ಸಾದೀಕ್ ಕರೆಯುತ್ತಿದ್ದಾನೆ ಎಂದು ಬೈಕ್’ನಲ್ಲಿ ಕರೆದೊಯ್ದಿದ್ದಾನೆ.

ಶೇಷಾದ್ರಿಪುರಂ ಗೂಡ್ಸ್ ಶೆಡ್ ಬಳಿ ಅನೀಸುರ್ ಅವರನ್ನು ಕರೆದೊಯ್ಯಲಾಗಿದೆ. ಅಲ್ಲಿಂದ ಸಾದಿಕ್, ದಾದಾಪೀರ್ ಮತ್ತಿತರರು ಬಲವಂತಾಗಿ ಕಾರಿನಲ್ಲಿ ಕೂರಿಸಿಕೊಂಡು ಹೊಳಲೂರು ಸಮೀಪ ಕರೆದೊಯ್ದಿದ್ದಾರೆ. ರಿವಲ್ವಾರ್ ತೋರಿಸಿ, ಮೂರು ಸಾವಿರ ರೂ. ಹಣ ಪಡೆದುಕೊಂಡಿದ್ದಾರೆ. ಇನ್ನೂ 50 ಸಾವಿರ ಹಣಕ್ಕೆ ಡಿಮಾಂಡ್ ಮಾಡಿದ್ದಾರೆ. ಈ ಸಂಬಂಧ ಅನೀಸುರ್ ಇಸ್ಲಾಂ ಕೋಟೆ ಠಾಣೆಗೆ ದೂರು ನೀಡಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ ಮೊಬೈಲ್ ನಂಬರ್ | 9964634494

ಈ ಮೇಲ್ | shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment