ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 13 JANUARY 2021
ದರೋಡೆಗೆ ಹೊಂಚು ಹಾಕಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಐವರನ್ನು ಬಂಧಿಸಲಾಗಿದೆ.
ಹಾರನಹಳ್ಳಿ ಕೆರೆ ಸಮೀಪ ಐವರ ಗ್ಯಾಂಗ್ ದರೋಡೆಗೆ ಹೊಂಚು ಹಾಕಿತ್ತು. ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದು, ಇಡೀ ಗ್ಯಾಂಗನ್ನ ವಶಕ್ಕೆ ಪಡೆಯಲಾಗಿದೆ.
ರಾಡ್, ಗರಗಸ, ಖಾರದ ಪುಡಿ
ರತಿಕ್, ಆಂಜನಪ್ಪ, ಹನುಮಂತಪ್ಪ, ಧರ್ಮಪ್ಪ ಮತ್ತು ಸಂತೋಷ್ ಬಂಧಿತರು. ಎಲ್ಲರು ಬಳ್ಳಾರಿ ಜಿಲ್ಲೆ ಹರಪನಹಳ್ಳಿಯವರು. ಇವರಿಂದ ಬೈಕುಗಳು, ಕಬ್ಬಿಣದ ರಾಡ್, ಖಾರದ ಪುಡಿ, ಗರಗಸವನ್ನು ವಶಕ್ಕೆ ಪಡೆಯಲಾಗಿದೆ.
ನಕಲಿ ಚಿನ್ನ ಮಾರುತ್ತಿದ್ದರು
ಇವರು ನಕಲಿ ಚಿನ್ನ ಮಾರಾಟದಲ್ಲಿ ನಿಸ್ಸೀಮರಾಗಿದ್ದರು ಎಂದು ತಿಳಿದು ಬಂದಿದೆ. ನಕಲಿ ಆಭರಣಗಳನ್ನು ತೋರಿಸಿ, ಮಾರಾಟ ಮಾಡುವುದಾಗಿ ನಂಬಿಸಿ, ವಂಚಿಸುತ್ತಿದ್ದರು.
ದರೋಡೆಗೆ ಹೊಂಚು ಹಾಕಿರುವ ಕುರಿತು ಮಾಹಿತಿ ಲಭ್ಯವಾಗುತ್ತಿದ್ದಂತೆ ಕುಂಸಿ ಠಾಣೆ ಸಬ್ ಇನ್ಸ್ ಪೆಕ್ಟರ್ ನವೀನ್ ಮಠಪತಿ ನೇತೃತ್ವದ ತಂಡ ದಾಳಿ ನಡೆಸಿ, ದರೋಡೆ ಕೋರರನ್ನು ಬಂಧಿಸಿದೆ. ವಿಚಾರಣೆ ನಡೆಯುತ್ತಿದೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200