ರಾಡ್, ಖಾರದಿ ಪುಡಿ ಹಿಡಿದು ದರೋಡೆಗೆ ಹೊಂಚು ಹಾಕಿದ್ದ ಗ್ಯಾಂಗ್ ಮೇಲೆ ಪೊಲೀಸರ ದಾಳಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ

131951794 1031215290691714 4061890617426774129 n.jpg? nc cat=108&ccb=2& nc sid=730e14& nc ohc=FkyaIRRMuUEAX9p7CwQ& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 JANUARY 2021

ದರೋಡೆಗೆ ಹೊಂಚು ಹಾಕಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಐವರನ್ನು ಬಂಧಿಸಲಾಗಿದೆ.

ಹಾರನಹಳ್ಳಿ ಕೆರೆ ಸಮೀಪ ಐವರ ಗ್ಯಾಂಗ್ ದರೋಡೆಗೆ ಹೊಂಚು ಹಾಕಿತ್ತು. ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದು, ಇಡೀ ಗ್ಯಾಂಗನ್ನ ವಶಕ್ಕೆ ಪಡೆಯಲಾಗಿದೆ.

ರಾಡ್, ಗರಗಸ, ಖಾರದ ಪುಡಿ

ರತಿಕ್, ಆಂಜನಪ್ಪ, ಹನುಮಂತಪ್ಪ, ಧರ್ಮಪ್ಪ ಮತ್ತು ಸಂತೋಷ್ ಬಂಧಿತರು. ಎಲ್ಲರು ಬಳ್ಳಾರಿ ಜಿಲ್ಲೆ ಹರಪನಹಳ್ಳಿಯವರು. ಇವರಿಂದ ಬೈಕುಗಳು, ಕಬ್ಬಿಣದ ರಾಡ್, ಖಾರದ ಪುಡಿ, ಗರಗಸವನ್ನು ವಶಕ್ಕೆ ಪಡೆಯಲಾಗಿದೆ.

ನಕಲಿ ಚಿನ್ನ ಮಾರುತ್ತಿದ್ದರು

ಇವರು ನಕಲಿ ಚಿನ್ನ ಮಾರಾಟದಲ್ಲಿ ನಿಸ್ಸೀಮರಾಗಿದ್ದರು ಎಂದು ತಿಳಿದು ಬಂದಿದೆ. ನಕಲಿ ಆಭರಣಗಳನ್ನು ತೋರಿಸಿ, ಮಾರಾಟ ಮಾಡುವುದಾಗಿ ನಂಬಿಸಿ, ವಂಚಿಸುತ್ತಿದ್ದರು.

ದರೋಡೆಗೆ ಹೊಂಚು ಹಾಕಿರುವ ಕುರಿತು ಮಾಹಿತಿ ಲಭ್ಯವಾಗುತ್ತಿದ್ದಂತೆ ಕುಂಸಿ ಠಾಣೆ ಸಬ್‍ ಇನ್ಸ್ ಪೆಕ್ಟರ್ ನವೀನ್ ಮಠಪತಿ ನೇತೃತ್ವದ ತಂಡ ದಾಳಿ ನಡೆಸಿ, ದರೋಡೆ ಕೋರರನ್ನು ಬಂಧಿಸಿದೆ. ವಿಚಾರಣೆ ನಡೆಯುತ್ತಿದೆ.

137222609 1043894822757094 322437303418384090 o.jpg? nc cat=111&ccb=2& nc sid=730e14& nc ohc=FXf3xO1XGYIAX854qqz& nc ht=scontent.fblr4 2

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment