ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | 15 ಮಾರ್ಚ್ 2019
ಗಮನ ಬೇರೆಡೆ ಸೆಳೆದು ಹಾಲಿನ ವ್ಯಾಪಾರಿಯೊಬ್ಬರು ತಂದಿದ್ದ ಮೂರು ಲಕ್ಷ ರೂಪಾಯಿಯನ್ನು ದರೋಡೆ ಮಾಡಲಾಗಿದೆ. ಶಿವಮೊಗ್ಗ ಬಿ.ಹೆಚ್.ರಸ್ತೆಯಲ್ಲಿ ಘಟನೆ ನಡೆದಿದೆ. ಇನ್ನು, ಇಡೀ ಘಟನೆ ಸಮೀಪದ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಪೆನ್ಷನ್ ಮೊಹಲ್ಲಾದ ಹಾಲಿನ ವ್ಯಾಪಾರಿ ಕುಮಾರ್, ಬಿ.ಹೆಚ್.ರಸ್ತೆಯಲ್ಲಿರುವ ಬ್ಯಾಂಕ್’ನಿಂದ ಮೂರು ಲಕ್ಷ ರೂ. ಹಣ ಡ್ರಾ ಮಾಡಿಕೊಂಡು ಹಿಂತಿರುಗುತ್ತಿದ್ದರು. ಈ ವೇಳೆ, ಬಿ.ಹೆಚ್.ರಸ್ತೆಯಲ್ಲಿ ದಿಢೀರ್ ಬಂದ ನಾಲ್ವರು, ಕುಮಾರ್ ಗಮನ ಬೇರೆಡೆ ಸೆಳೆದು ಮೂರು ಲಕ್ಷ ರೂ. ದರೋಡೆ ಮಾಡಿದ್ದಾರೆ.
ಹತ್ತು ರೂಪಾಯಿಯ ನೋಟುಗಳಿಗಾಗಿ ಹೋಯ್ತು ಮೂರು ಲಕ್ಷ

ಬಿ.ಹೆಚ್.ರಸ್ತೆಯಲ್ಲಿ ಕುಮಾರ್ ಬೈಕ್’ನಲ್ಲಿ ಮರಳುತ್ತಿದ್ದರು. ಈ ವೇಳೆ ಹಿಂಬದಿ ಬೈಕ್’ನಲ್ಲಿ ಬಂದ ಇಬ್ಬರು, ಹತ್ತತ್ತು ರೂಪಾಯಿ ನೋಟುಗನ್ನು ಕೆಳಗೆ ಹಾಕಿ, ಕುಮಾರ್ ಅವರಿಗೆ ನಿಮ್ಮ ದುಡ್ಡು ರಸ್ತೆಯಲ್ಲಿ ಬಿದ್ದಿದೆ ಅಂತಾ ತಿಳಿಸಿದರು. ಇದನ್ನು ನಂಬಿದ ಕುಮಾರ್ ಬೈಕ್ ಪಕ್ಕಕ್ಕೆ ನಿಲ್ಲಿಸಿ, ತಮ್ಮದೇ ದುಡ್ಡಿರಬೇಕು ಎಂದು ನೋಟುಗಳನ್ನು ಆರಿಸಿಕೊಳ್ಳುತ್ತಿದ್ದರು. ಇದೇ ಸಮಯಕ್ಕೆ ಹೊಂಚು ಹಾಕಿದ್ದ ಗ್ಯಾಂಗ್’ನ ಮತ್ತಿಬ್ಬರು, ಕುಮಾರ್ ಅವರ ಬೈಕ್’ನಲ್ಲಿದ್ದ ಹಣದ ಬ್ಯಾಗ್ ದರೋಡೆ ಮಾಡಿ ಪರಾರಿಯಾಗುತ್ತಾರೆ.
ಈ ಕುರಿತು ಕೊಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | shivamoggalive@gmail.com
LATEST NEWS
- ಸರಕು ರೇಟ್ ಕುಸಿತ, ಉಳಿದ ಮಾದರಿ ಅಡಿಕೆ ರೇಟ್ ಎಷ್ಟಿದೆ? | 2 ಮಾರ್ಚ್ 2026

- ಮಾರಿಕಾಂಬ ಜಾತ್ರೆಯಲ್ಲಿ ಕಳೆದು ಹೋದ ವೃದ್ಧೆ, ಪತ್ತೆ ಮಾಡಿ ಮನೆಗೆ ಬಿಟ್ಟು ಬಂದ ಪೊಲೀಸ್, ಆಗಿದ್ದೇನು?

- ನಂದಿನಿ ಗ್ರಾಹಕರಿಗೆ ಗುಡ್ ನ್ಯೂಸ್, 1 ಕೆ.ಜಿ ಬಕೆಟ್ ಮೊಸರು ಮಾರುಕಟ್ಟೆಗೆ ಎಂಟ್ರಿ, ಎಷ್ಟಿರುತ್ತೆ ರೇಟ್?

- ‘ಒಂದು ಕೋಟಿ ರುಪಾಯಿ ನೆರವು, ಸರ್ಕಾರಿ ನೌಕರಿ ಕೊಡಬೇಕು’, ಕುರುಬರ ವೇದಿಕೆ ಪಟ್ಟು

- ಸಚಿವ ಮಧು ಬಂಗಾರಪ್ಪ ಜನ್ಮದಿನ, ವಿದ್ಯಾರ್ಥಿಗಳು, ಪೌರ ಕಾರ್ಮಿಕರಿಗೆ ವಿಮಾನಯಾನ

About The Editor
ನಿತಿನ್ ಆರ್.ಕೈದೊಟ್ಲು





